News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗಿದೆ: ಎನ್‌.ಶಶಿಕುಮಾರ್

ಮಂಗಳೂರು: ಕರಾವಳಿ ಭಾಗದಲ್ಲಿ ಮೂರು ದಿನಗಳ ಅಂತರದಲ್ಲಿ ಎರಡು ಹತ್ಯೆಗಳು ಸಂಭವಿಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ.ಆದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿಯುತ ಪೋಸ್ಟ್‌ಗಳನ್ನು ಹಾಕಿ ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂಥವರಿಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಸಂಬಂಧಿತ ವಿಚಾರದ ಬಗ್ಗೆ ಹಾಕುತ್ತಿರುವ ಪ್ರತಿಯೊಂದು ಪೋಸ್ಟ್ ‌ಗಳನ್ನು ಗಮನಿಸಲಾಗುತ್ತಿದೆ. ಸೈಬರ್ ಕ್ರೈಂ ಪೊಲೀಸರ ಸಹಕಾರ ಪಡೆದು ಇಂಥವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದಿದ್ದಾರೆ.

ಪ್ರಕರಣದ ತನಿಖೆಗಳು ಪ್ರಗತಿಯಲ್ಲಿದ್ದು, ಯಾರು ಕೂಡ ಶಾಂತಿಭಂಗ ಮಾಡುವ ಪ್ರಯತ್ನಕ್ಕೆ ಕೈ ಹಾಕಬಾರದು ಎಂದಿದ್ದಾರೆ.

ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಸೂಚನೆ ನೀಡಿದ್ದಾರೆ.

ಆಗಸ್ಟ್ 1ರವರೆಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ತೆರೆದಿರಬೇಕು ಎಂದಿದ್ದಾರೆ.

ಅಲ್ಲದೆ ಜಿಲ್ಲೆಯಲ್ಲಿ ಶಾಂತಿಸುವವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನರ ಸಹಕಾರ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಜುಲೈ 30ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮುದಾಯದ ಪ್ರಮುಖರೊಂದಿಗೆ ಶಾಂತಿ ಸಭೆ ಆಯೋಜಿಸಲಾಗಿದೆ ಎಂದಿದ್ದಾರೆ..

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top