News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರು-ಬೆಂಗಳೂರು-ಚೆನ್ನೈ ಬುಲೆಟ್‌ ಟ್ರೈನ್‌: ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಸಮ್ಮತಿ

ಬೆಂಗಳೂರು: ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದ ರಾಜ್ಯದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

484 ಕಿಲೋಮೀಟರ್ ಅಂತರವನ್ನು 3 ಗಂಟೆಗಳಲ್ಲಿ ಕ್ರಮಿಸುವ 1.15 ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆ ಇದಾಗಿದೆ. ಯೋಜನೆ ಜಾರಿಯಾದರೆ, ಮೈಸೂರಿನಿಂದ ಬೆಂಗಳೂರಿಗೆ ಕೇವಲ 45 ನಿಮಿಷಗಳಲ್ಲಿ ಪ್ರಯಾಣಿಸಬಹುದು. ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಲು ಎರಡು ಗಂಟೆಗಳ ಅವಧಿ ಸಾಕು. ಯೋಜನೆಗೆ ಬೇಕಾದ ಭೂಮಿಯನ್ನು ಸರ್ಕಾರ ಒದಗಿಸಿಕೊಡಲಿದೆ.

ಮುಂಬೈ -ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ನಂತರ ಕರ್ನಾಟಕ ಮತ್ತು ತಮಿಳುನಾಡಿನ ಪ್ರಮುಖ ನಗರಗಳನ್ನು ಬುಲೆಟ್ ಟ್ರೈನ್ ಮೂಲಕ ಸಂಪರ್ಕ ಕಲ್ಪಿಸಲು ಸರಕಾರ ಮುಂದಾಗಿದೆ ಎಂದು ಮೂಲಸೌಕರ್ಯ ಸಚಿವ ವಿ ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

ಯೋಜನೆಗೆ ಸಂಬಂಧಿಸಿದ ಸಮಗ್ರ ಯೋಜನಾ ವರದಿಯನ್ನು ನೀಡುವಂತೆ ನ್ಯಾಷನಲ್ ಹೈ ಸ್ಪೀಡ್ ರೈಲ್ವೆ ಕಾರ್ಪೊರೇಷನ್ ಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ‌ ಎಂದಿದ್ದಾರೆ.

ಈ ಯೋಜನೆಗೆ ಪೂರ್ಣ ಹಣವನ್ನು ಕೇಂದ್ರವೇ ಭರಿಸಲಿದೆ. ಯೋಜನೆಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮಹತ್ವದ ಒಪ್ಪಂದವು ಆಗಬೇಕಾಗಿದೆ ಎಂದಿದ್ದಾರೆ.

ಭೂಮಿ ಒದಗಿಸುವ ನಿಟ್ಟಿನಲ್ಲಿ ಇನ್ನು ಎರಡು ದಿನಗಳಲ್ಲಿ ಮಹತ್ವದ ಸಭೆಯನ್ನು ನಡೆಸಲಾಗುತ್ತದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top