News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಚಾರಣೆ ನೆಪದಲ್ಲಿ ಅಮಾಯಕರಿಗೆ ಕಿರುಕುಳ ನೀಡಿದರೆ ಪ್ರತಿಭಟನೆ: ಶಾಸಕ ಭರತ್‌ ಶೆಟ್ಟಿ

ಮಂಗಳೂರು: ಸುರತ್ಕಲ್‌ ವ್ಯಾಪ್ತಿಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಯ ನೆಪದಲ್ಲಿ ಅಮಾಯಕರನ್ನು ಠಾಣೆಗೆ ಎಳೆದೊಯ್ತು ಕಿರುಕುಳ ನೀಡುತ್ತಿರುವ ಪೊಲೀಸರ ವಿರುದ್ಧ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ಕಿಡಿ ಕಾರಿದ್ದಾರೆ.

ಕೊಲೆ ಮಾಡಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಯಾವ ವಾಹನದಲ್ಲಿ ಆರೋಪಿಗಳು ಬಂದಿದ್ದಾರೆ ಎಂಬುದು ಕೂಡ ಸಿಸಿಟಿವಿ ಮೂಲಕ ತಿಳಿದು ಬಂದಿದೆ. ಆದರೂ ನೈಜ ಆರೋಪಿಗಳನ್ನು ಬಂಧನ ಮಾಡುವ ಬದಲು ಪೊಲೀಸರು ಅಮಾಯಕ ಕಾರ್ಯಕರ್ತರನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಎಳೆದುಕೊಂಡು ಹೋಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಮಾಯಕರಿಗೆ ತೊಂದರೆ ಕೊಡುತ್ತಿರುವ ಬಗ್ಗೆ ದೂರುಗಳು ನನಗೆ ಬಂದಿದೆ. ಇಂತಹ ಘಟನೆ ಪುನರಾವರ್ತನೆಯಾದರೆ ಧರಣಿ ನಡೆಸುತ್ತೇವೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಸಾಕ್ಷ್ಯಾಧಾರಗಳು ಪೊಲೀಸರ ಕೈಯಲ್ಲಿದೆ. ನೈಜ ಆರೋಪಿಗಳ ಬಂಧನಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ಆದರೆ ಪೊಲೀಸರು ಅಮಾಯಕರ ಮನೆಗೆ ನುಗ್ಗಿ ಭೀತಿ ಹುಟ್ಟಿಸುವ ಕೆಲಸ ಮಾಡಬಾರದು ಎಂದಿದ್ದಾರೆ .

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top