News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

50 ಲಕ್ಷ ರಾಷ್ಟ್ರಧ್ವಜ ವಿತರಿಸುವ ಗುರಿ ಹೊಂದಿದೆ ಕರ್ನಾಟಕ ಸರ್ಕಾರ

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶ ವ್ಯಾಪಿಯಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸುತ್ತಿದೆ. ಅಭಿಯಾನದಡಿ ಪ್ರತಿ ಮನೆಯಲ್ಲೂ ಆಗಸ್ಟ್ 13 ರಿಂದ 15 ರವರೆಗೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಸುಮಾರು 50 ಲಕ್ಷ ಬಾವುಟಗಳನ್ನು ವಿತರಣೆ ಮಾಡುವ ಗುರಿಯನ್ನು ಹೊಂದಿದೆ.

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ರಾಷ್ಟ್ರಧ್ವಜ ಮಾರಾಟ ಮಾಡುವ ಮಳಿಗೆಯನ್ನು ನಿನ್ನೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಉದ್ಘಾಟನೆ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಸಾಂಕೇತಿಕವಾಗಿ ಧ್ವಜ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಬಿಜೆಪಿಯ ಎಲ್ಲಾ ಕಚೇರಿಗಳಲ್ಲೂ ರಾಷ್ಟ್ರಧ್ವಜ ಲಭ್ಯವಾಗಲಿದೆ. ಪ್ರತಿಧ್ವಜಕ್ಕೆ 25 ರೂಪಾಯಿ ನೀಡಿ ಪಡೆಯುವಂತೆ ಮನವಿ ಮಾಡಲಾಗಿದೆ. ಧ್ವಜಾರೋಹಣ ಅವರೋಹಣದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮನವಿ ಮಾಡಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top