News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಛತ್ತೀಸ್‌ಗಢದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ: ಒರ್ವ ನಕ್ಸಲನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರಣ್ಯದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೆಜ್ಜಿ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಾರ್‌ಪದರ್ ಗ್ರಾಮದ ಬಳಿಯ ಅರಣ್ಯದಲ್ಲಿ ಇಂದು ಬೆಳಗ್ಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಬೆಳಗ್ಗೆ 7:30ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ತಂಡ ಕಾಡಿನ ಮೂಲಕ ಸಾಗುತ್ತಿದ್ದಾಗ ಎರಡು ಕಡೆಯವರ ನಡುವೆ ಗುಂಡಿನ ಚಕಮಕಿ ನಡೆಯಿತು.

“ಗುಂಡಿನ ಚಕಮಕಿಯನ್ನು ನಿಂತ ನಂತರ ಸ್ಥಳದಿಂದ ನಕ್ಸಲರ ಮೃತದೇಹವನ್ನು ವಶಪಡಿಸಿಕೊಳ್ಳಲಾಯಿತು,  ಮೃತ ಮಾವೋವಾದಿಯನ್ನು ಮಾವೋವಾದಿಗಳ ವಿಭಾಗೀಯ ಸಮಿತಿ ಸದಸ್ಯ (ಡಿವಿಸಿ) ಮದ್ವಿ ಹದ್ಮಾ ಎಂದು ಗುರುತಿಸಲಾಗಿದೆ” ಎಂದು ಐಜಿ ಹೇಳಿದ್ದಾರೆ.

ಕಳೆದ ಹತ್ತು ದಿನಗಳಲ್ಲಿ ಸುಕ್ಮಾ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಕ್ಸಲರನ್ನು ಹತ್ಯೆಗೈದ ಮೂರನೇ ಘಟನೆ ಇದಾಗಿದೆ.

ಜುಲೈ 29 ರಂದು ಬಿಂದ್ರಪಾಣಿ ಗ್ರಾಮದ ಬಳಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರೂ 5 ಲಕ್ಷ ಬಹುಮಾನ ಹೊಂದಿದ್ದ ನಕ್ಸಲನನ್ನು ಕೊಲ್ಲಲಾಯಿತು ಮತ್ತು ಫುಲ್‌ಬಾಗ್ಡಿ ಪ್ರದೇಶದಲ್ಲಿ ಮತ್ತೊಂದು ನಕ್ಸಲನನ್ನು ಹೊಡೆದುರುಳಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top