News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ, ಪ್ರವೀಣ್‌ ನೆಟ್ಟಾರು ಹತ್ಯೆ ತನಿಖೆ ಪ್ರಗತಿಯಲ್ಲಿದೆ: ಸಿಎಂ

ಬೆಂಗಳೂರು: ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲಿಲ್ಲಿ ಮಾಡಬೇಕೆಂದು ನಿರ್ಧಾರ ಮಾಡಲಾಗುತ್ತಿದೆ. ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ವಿವರಗಳನ್ನು 3-4 ದಿನಗಳಲ್ಲಿ ಪಕ್ಷ ಪ್ರಕಟಿಸಲಿದೆ ಎಂದರು.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು,  ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದರು.

ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top