News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರೀಯತೆಯೇ ನಮ್ಮ ನಿಲುವು, ಬೇಧ-ಭಾವ ಮಾಡುವುದಿಲ್ಲ : ಸಿಎಂ ಬೊಮ್ಮಾಯಿ

ದಾವಣಗೆರೆ: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ದಾವಣಗೆರೆಯ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಅಂಥ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮೇಶ್ವರ ವಜ್ರ ಮಹೋತ್ಸವಕ್ಕೆ ಗುರುಗಳು ಆಹ್ವಾನ ನೀಡಿದ್ದ ಮೇರೆಗೆ ಇಲ್ಲಿಗೆ ಬಂದಿದ್ದೇನೆ. ನಂತರ ಕೊಪ್ಪಳ್ಳಕ್ಕೆ ಹೋಗಲಿದ್ದೇನೆ ಎಂದರು.

ಹಿಂದೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿದೆ
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ. ಖಂಡಿತವಾಗಿಯೂ ನಮ್ಮ ಪೊಲೀಸರು ಯಾರು ಕೊಲೆಗಡುಕರಿದ್ದಾರೆ ಅವರನ್ನು ಪತ್ತೆ ಹಚ್ಚುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರತೆ ಸಮಸ್ಯೆ ಇಲ್ಲ
ಗೃಹ ಸಚಿವರ ಮನೆಗೆ ಭದ್ರತೆ ಸಮಸ್ಯೆಯಿಲ್ಲ. ಪ್ರತಿಭಟನಾಕಾರರು ಬಂದ ಸಂದರ್ಭದಲ್ಲಿ ಭದ್ರತೆಯ ಸಮಯದಲ್ಲಿ ಯಾರು ಇರಬೇಕಿತ್ತೋ ಅವರು ಇರಲಿಲ್ಲ. ಅವರಿಗೆ ತಾಕೀತು ಮಾಡಿ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಮಂಕಿಪಾಕ್ಸ್ ಚಿಕಿತ್ಸೆ ವ್ಯವಸ್ಥೆ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ

ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಈ ಕುರಿತು ನಾಳೆ ಸಭೆ ನಡೆಯಲಿದೆ. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರ ಜತೆಗೆ ಮಾಡುತ್ತೇವೆ. ಮಂಕಿಪಾಕ್ಸ್ ಬಗ್ಗೆ ಕೆಲವು ನಿರ್ದೇಶನ ಮತ್ತು ಔಷಧಿ ವ್ಯವಸ್ಥೆಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top