ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ʼಮನ್ ಕೀ ಬಾತ್ʼ ಕಾರ್ಯಕ್ರಮದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಇಂದಿನಿಂದ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ಚರ್ನಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕುವಂತೆ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಅದರಂತೆ ಅವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಪ್ರೊಫೈಲ್ ಪಿಕ್ಚರ್ ಅನ್ನು ತಿರಂಗಾಕ್ಕೆ ಬದಲಾಯಿಸಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
“ತ್ರಿವರ್ಣ ಧ್ವಜವು ನಮ್ಮನ್ನು ಬೆಸೆಯುತ್ತದೆ ಮತ್ತು ದೇಶಕ್ಕಾಗಿ ಏನನ್ನಾದರೂ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ. ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಪ್ರತಿಯೊಬ್ಬರೂ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಹಾಕಿ” ಎಂದು ಮೋದಿ ಮನ್ ಕೀ ಬಾತ್ನಲ್ಲಿ ಹೇಳಿದ್ದರು.
ಇಂದು ಟ್ವಿಟ್ ಮಾಡಿರುವ ಅವರು, “ಇಂದು 2ನೇ ಆಗಸ್ಟ್ ವಿಶೇಷವಾದದ್ದು, ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುತ್ತಿರುವ ಈ ಸಮಯದಲ್ಲಿ, ನಮ್ಮ ರಾಷ್ಟ್ರವು ನಮ್ಮ ತ್ರಿವರ್ಣ ಧ್ವಜವನ್ನು ಆಚರಿಸುವ ಒಂದು ಸಾಮೂಹಿಕ ಆಂದೋಲನವಾದ ಹರ್ ಘರ್ ತಿರಂಗಾಕ್ಕೆ ಸಿದ್ಧವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮಗಳ ಡಿಪಿಯನ್ನು ಬದಲಾಯಿಸಿದ್ದೇನೆ ಮತ್ತು ನಿಮ್ಮೆಲ್ಲರನ್ನೂ ಅದೇ ರೀತಿ ಮಾಡುವಂತೆ ಒತ್ತಾಯಿಸುತ್ತೇನೆ” ಎಂದಿದ್ದಾರೆ.
It is a special 2nd August today! At a time when we are marking Azadi Ka Amrit Mahotsav, our nation is all set for #HarGharTiranga, a collective movement to celebrate our Tricolour. I have changed the DP on my social media pages and urge you all to do the same. pic.twitter.com/y9ljGmtZMk
— Narendra Modi (@narendramodi) August 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.