News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸದರ ʼತಿರಂಗಾ ಬೈಕ್ ರ‍್ಯಾಲಿʼಗೆ ವೆಂಕಯ್ಯ ನಾಯ್ಡು ಚಾಲನೆ

ನವದೆಹಲಿ: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಇಂದು ಬೆಳಗ್ಗೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಸಂಸತ್ ಸದಸ್ಯರ ‘ತಿರಂಗಾ ಬೈಕ್ ರ‍್ಯಾಲಿ’ ಗೆ ಚಾಲನೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ಹರ್ ಘರ್ ತಿರಂಗಾ ಅಭಿಯಾನದ ನೆನಪಿಗಾಗಿ ಕೆಂಪುಕೋಟೆಯಿಂದ ವಿಜಯ್ ಚೌಕ್ ವರೆಗೆ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಕೂಡ ಭಾಗವಹಿಸಿದ್ದರು.

ಕೇಂದ್ರ ಸಂಸ್ಕೃತಿ ಸಚಿವಾಲಯವು ಈ ರ‍್ಯಾಲಿಯನ್ನು ಆಯೋಜನೆ ಮಾಡಿದ್ದು, ಎಲ್ಲಾ ಪಕ್ಷಗಳ ಸಂಸದರನ್ನು ಇದರಲ್ಲಿ ಭಾಗವಹಿಸುವಂತೆ ಕೋರಲಾಗಿತ್ತು.

ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ನಿಮಿತ್ತ ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾನದಡಿ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಆಗಸ್ಟ್‌ 13 ರಿಂದ 15ರವರೆಗೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಕೋರಲಾಗಿದೆ.

ಪ್ರಧಾನಿ ಸೇರಿದಂತೆ ಹಲವಾರು ಗಣ್ಯರು ಈಗಾಗಲೇ ತಮ್ಮ ಸಾಮಾಜಿಕ ಜಾಲತಾಣಗಳ ಪ್ರೋಫೈಲ್‌ ಪಿಕ್ಟರ್‌ ಅನ್ನು ತಿರಂಗಾಗೆ ಬದಲಾಯಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top