News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಗಸ್ಟ್ 7 ರಿಂದ ಕೆಆರ್‌ಎಸ್‌ ಹಿನ್ನೀರಿನಲ್ಲಿ ಸೈಲಿಂಗ್ ಚಾಂಪಿಯನ್ ಶಿಪ್ 

ಮಂಡ್ಯ: ಆಗಸ್ಟ್ 07 ರಿಂದ 13 ರವರೆಗೆ ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋರ್ಡ್ ಚಾಂಪಿಯನ್‌ಶಿಪ್‌ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವನಾಗಿ ಈ ಕ್ರೀಡೆಯ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅಬಕಾರಿ ಖಾತೆ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, KRS ಹಿನ್ನೀರಿನಲ್ಲಿ ಆಗಸ್ಟ್ 07 ರಿಂದ 13 ರವರೆಗೆ ಈ ಕ್ರೀಡೆ ಆಯೋಜಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತದ ಸಹಕಾರದೊಂದಿಗೆ, ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್(MEG) ಮತ್ತು ಜನರಲ್ ತಿಮ್ಮಯ್ಯ ರಾಷ್ಡ್ರೀಯ ಸಾಹಸ ಅಕಾಡೆಮಿ (GETHNAA) ಸಹಾಭಾಗಿತ್ವದಲ್ಲಿ ಈ ಸ್ಪರ್ಧೆ ನಡೆಯಲಿದೆ. .ದೇಶದ ಮೂಲೆ ಮೂಲೆಗಳಿಂದ 2೦೦ಕ್ಕೂ ಹೆಚ್ಚು ಸೈಲರ್ಸ್ (ನಾವಿಕರು) ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುವ ಸೈಲರ್ಸ್‌ಗೆ ಇದೊಂದು ಅದ್ಭುತ ಅವಕಾಶವಾಗಿದ್ದು, ತಮ್ಮ ಪ್ರತಿಭೆಯನ್ನು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೆ ಉತ್ತಮ ವೇದಿಕೆ ಆಗಿದೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯು ಕ್ಲೈಬಿಂಗ್, ಕಯಾಕಿಂಗ್ ಮತ್ತು ಕೆನೋಯಿಂಗ್ ಸೇರಿದಂತೆ ಹಲವು ಸಾಹಸಮಯ ಸ್ಪೋರ್ಟ್ಸ್ ಗಳನ್ನು ಆಯೋಜಿಸಿದ್ದು, ಸೈಲಿಂಗ್ ಕೂಡ ಒಂದಾಗಿದೆ. ಜೇತನಾ ಮೂಲಕ ಇದುವರೆಗೂ ಸಾವಿರಾರು ಗ್ರಾಮೀಣ ಯುವ ಜನತೆಗೆ ಸಾಹಸ ಕ್ರೀಡೆಗಳ ಪರಿಚಯ ಹಾಗೂ ತರಬೇತಿ ನೀಡಲಾಗಿದೆ. ಈ ಸ್ಪರ್ಧೆ ಆಯೋಜಿಸಿರುವುದರಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ಸಚಿವರು ಹೇಳಿದರು.

ಜಿಲ್ಲಾ ಸಂದರ್ಭದಲ್ಲಿ ರೇಷ್ಮೆ ಯುವ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ,ಶಾಸಕ ಸಿಎಸ್ ಪುಟ್ಟರಾಜು ಉಪಸ್ಥಿತರಿದ್ದರು.

ನಂತರ ವಾಟರ್ ಬೈಕ್‌ನಲ್ಲಿ ಸಚಿವ ಕೆ.ಗೋಪಾಲಯ್ಯ ಮತ್ತು ನಾರಾಯಣ ಗೌಡ ಅವರು ರೈಡ್ ಮಾಡಿ ಸಂಭ್ರಮಿಸಿದರು

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top