ನವದೆಹಲಿ: ಆಗಸ್ಟ್ 5 ರಿಂದ 15 ರವರೆಗೆ ದೇಶಾದ್ಯಂತದ ಎಲ್ಲಾ ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕಗಳು ಮತ್ತು ತಾಣಗಳಿಗೆ ಸಂದರ್ಶಕರು ಮತ್ತು ಪ್ರವಾಸಿಗರಿಗೆ ಉಚಿತ ಪ್ರವೇಶವನ್ನು ಸರ್ಕಾರ ಒದಗಿಸಿದೆ.
75ನೇ ಸ್ವಾತಂತ್ರ್ಯ ದಿನಾಚರಣೆಯ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಈ ವರ್ಷದ ಆಗಸ್ಟ್ 5 ರಿಂದ 15 ರವರೆಗೆ ಎಲ್ಲಾ ಟಿಕೆಟ್ ಹೊಂದಿರುವ ಕೇಂದ್ರ ಸಂರಕ್ಷಿತ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳಲ್ಲಿ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾನಿರ್ದೇಶಕರು ಕೂಡ ತಿಳಿಸಿದ್ದಾರೆ.
ವಿದೇಶಿ ಪ್ರವಾಸಿಗರು ಕೂಡ ಉಚಿತವಾಗಿ ಭಾರತದ ಸಂರಕ್ಷಿತ ಪಾರಂಪರಿಕ ತಾಣ, ಮ್ಯೂಸಿಯಂ, ಸ್ಮಾರಕಗಳನ್ನು ವೀಕ್ಷಿಸಬಹುದಾಗಿದೆ.
ದೇಶವಾಸಿಗಳು ಭಾರತದ ಪಾರಂಪರಿಕ ತಾಣಗಳನ್ನು ಕಣ್ತುಂಬಿಕೊಳ್ಳಲಿ, ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಲಿ ಎಂಬ ಸದುದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
As part of ‘Azadi ka #AmritMahotsav‘ and #75thindependenceday celebrations, no fees shall be charged from visitors (both domestic and foreign) at all ticketed Centrally Protected Monuments/Museums/Archaeological Sites & Remains, from 5th August 2022 to 15th August, 2022. https://t.co/j2JnKfuLGb
— Archaeological Survey of India (@ASIGoI) August 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.