News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದಕ್ಷಿಣಕನ್ನಡದಲ್ಲಿ 1 ವಾರ ಬೈಕ್‌ನಲ್ಲಿ ಪುರುಷರ ಹಿಂಬದಿ ಸವಾರಿಗೆ ನಿರ್ಬಂಧ

ಮಂಗಳೂರು: ದಕ್ಷಿಣಕನ್ನಡದಲ್ಲಿ ಕಾನೂನು ಸುವ್ಯವಸ್ಥೆಯನ್ನು ಅವಲೋಕಿಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಆಗಸ್ಟ್ 5 ರಂದು ರಾತ್ರಿ ಕರ್ಫ್ಯೂ ಹಿಂಪಡೆದ ನಂತರ ನಗರದಲ್ಲಿ ಒಂದು ವಾರಗಳ ಕಾಲ ಬೈಕ್‌ನಲ್ಲಿ  ಪುರುಷರ ಹಿಂಬದಿ  ಸಂಚಾರಕ್ಕೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಗಸ್ಟ್ 5 ರವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಕರ್ಫ್ಯೂ ಸಡಿಲಿಸಿದ ನಂತರ ದ್ವಿಚಕ್ರ ವಾಹನಗಳಲ್ಲಿ  ಪುರುಷರು ಹಿಂಬದಿ ಸವಾರಿ ಮಾಡಲು ಅವಕಾಶ ನೀಡದಿರಲು  ನಾವು ನಿರ್ಧರಿಸಿದ್ದೇವೆ. ಈ ಬಗ್ಗೆ ಆದೇಶ ಹೊರಡಿಸಲಾಗುವುದು. ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಹಿಂಬದಿ ಸವಾರರಾಗಿ ಸಂಚಾರ ಮಾಡಲು ನಿರ್ಬಂಧ ಇಲ್ಲ” ಎಂದಿದ್ದಾರೆ.

ನಂತರ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ನಡೆದ ಮೂರು ಕೊಲೆಗಳ ತನಿಖೆಯ ಪ್ರಗತಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಇದೇ ವೇಳೆ ಹಳೆಯ ಪ್ರಕರಣಗಳನ್ನು ಹೊಂದಿರುವ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡುತ್ತೇವೆ ಎಂದಿದ್ದಾರೆ.

“ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದೆ. ಅದು ಮುಗಿದ ನಂತರ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ಬೆಳ್ಳಾರೆಗೂ ಭೇಟಿ ನೀಡಿ ಪ್ರಕರಣ ಹೇಗೆ ನಡೆದಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ” ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 100 ಚೆಕ್ ಪೋಸ್ಟ್‌ಗಳು ಮತ್ತು ತಲಪಾಡಿ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಕೆಎಸ್‌ಆರ್‌ಪಿ ಪ್ಲಟೂನ್‌ಗಳನ್ನು ಸಹ ನಿಯೋಜಿಸಲಾಗಿದ್ದು, ಇದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪರಿಣಾಮಕಾರಿಯಾಗಿರುತ್ತದೆ ಎಂದಿದ್ದಾರೆ.

”ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನಾವು ಅಪರಾಧಿಗಳೊಂದಿಗೆ ತುಂಬಾ ಕಟ್ಟುನಿಟ್ಟಾಗಿರುತ್ತೇವೆ. ನಾವು ಕೇರಳದೊಂದಿಗೆ ಸಭೆಯನ್ನು ಆಗಾಗ ನಡೆಸುತ್ತೇವೆ” ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top