News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

370ನೇ ವಿಧಿ ರದ್ಧತಿಯ ಐತಿಹಾಸಿಕ ನಿರ್ಧಾರಕ್ಕೆ ಇಂದಿಗೆ 3 ವರ್ಷ

ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಧಾರಕ್ಕೆ ಇಂದು ಮೂರು ವರ್ಷ. ಆಗಸ್ಟ್ 2019 ರ‌ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿತು ಮತ್ತು ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಭಾಗವಾಗಿ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿವೆ.

ಈ ಹಿಂದೆ, 370 ನೇ ವಿಧಿಯಲ್ಲಿ ಉಲ್ಲೇಖಿಸಲಾದ ನಿಬಂಧನೆಗಳ ಪ್ರಕಾರ ಜಮ್ಮ ಮತ್ತು ಕಾಶ್ಮೀರ ಪ್ರತ್ಯೇಕ ಸಂವಿಧಾನವನ್ನು ಹೊಂದಿದ್ದ ದೇಶದ ಏಕೈಕ ರಾಜ್ಯವಾಗಿತ್ತು. ಇದು ಆ ರಾಜ್ಯಕ್ಕೆ ವಿಶೇಷ ಸ್ವಾಯತ್ತ ಸ್ಥಾನಮಾನವನ್ನು ನೀಡುವ ‘ತಾತ್ಕಾಲಿಕ ನಿಬಂಧನೆ’ಯಾಗಿತ್ತು.

ಆರ್ಟಿಕಲ್ 370 ರನ್ನು ರದ್ದುಗೊಳಿಸಿದ ನಂತರ, ಎಲ್ಲಾ ಕೇಂದ್ರ ಕಾನೂನುಗಳು ಮತ್ತು ವಿವಿಧ ಕಲ್ಯಾಣ ಯೋಜನೆಗಳು ಅಲ್ಲಿ ಅನ್ವಯಿಸುತ್ತವೆ ಮತ್ತು ಈ ನಿರ್ಧಾರವು ಈ ಪ್ರದೇಶದಲ್ಲಿ ಹೂಡಿಕೆಯನ್ನು ಆಕರ್ಷಿಸಲು ದಾರಿ ಮಾಡಿಕೊಟ್ಟಿದೆ ಮತ್ತು ಇದು ಅಲ್ಲಿನ ಅಭಿವೃದ್ಧಿಗೆ ಕಾರಣವಾಗುತ್ತಿದೆ.

ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್‌ ಮಾಡಿ, “ನರೇಂದ್ರ ಮೋದಿ ಸರ್ಕಾರದ ಪರಿವರ್ತನಾ ಉಪಕ್ರಮಗಳಿಗೆ ಧನ್ಯವಾದಗಳು, ಆರ್ಟಿಕಲ್ 370 ರದ್ದತಿಯು ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನವನ್ನು ನೀಡಿದೆ. ಜಮ್ಮು ಮತ್ತು ಕಾಶ್ಮೀರದ ವಿಮಾನ ನಿಲ್ದಾಣಗಳು ಮತ್ತು ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರು ದಾಖಲೆಯ ಸಂಖ್ಯೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಮತ್ತು ಅಕ್ಟೋಬರ್ 2021 ಮತ್ತು ಮಾರ್ಚ್ 2022 ರ ನಡುವೆ 79 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಅಲ್ಲಿಗೆ ಭೇಟಿ ನೀಡಿದ್ದಾರೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top