News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನ.1 ರಂದು ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ 

ಬೆಂಗಳೂರು: ಚಿತ್ರನಟ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ

1922 ರಿಂದ ಫಲಪುಷ್ಪ ಪ್ರದರ್ಶನ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವರ್ಷ ಅತಿ ಹೆಚ್ವು ಜನರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಾತಂತ್ರ್ಯೋತ್ಸವದ ಅಮೃತ ವರ್ಷಾಚರಣೆಯ ಅಂಗವಾಗಿ ಸಂಭ್ರಮ ತುಂಬಿದೆ. ಫಲಪುಷ್ಪ ಪ್ರದರ್ಶನಕ್ಕೆ ವಿಶೇಷ ಕಳೆ ಬಂದಿದೆ. ಮುಂದಿನ 10 ದಿನಗಳ ಕಾಲ ಪ್ರತಿ ದಿನ ಲಕ್ಷಾಂತರ ಜನ ಬರುವ ನಿರೀಕ್ಷೆ ಇದೆ. ಈ ಬಾರಿ ಡಾ: ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನ ಏರ್ಪಟ್ಟಿದೆ. ಹಾಗಾಗಿ ಇನ್ನಷ್ಟು ಜನರನ್ನು ಪ್ರದರ್ಶನ ಆಕರ್ಷಿಸುವ ನಿರೀಕ್ಷೆ ಇದೆ. ತೋಟಗಾರಿಕಾ ಇಲಾಖೆ ಸಚಿವ ಮುನಿರತ್ನ ಅವರ ನೇತೃತ್ವದಲ್ಲಿ ಅಧಿಕಾರಿಗಳು ಉತ್ತಮವಾಗಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಿ ಆನಂದಿಸಬೇಕೆಂದು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top