News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉಪ ರಾಷ್ಟ್ರಪತಿ ಚುನಾವಣೆ ಆರಂಭ: ಜಗದೀಪ್‌ ಧನ್ಕರ್‌ Vs ಮಾರ್ಗರೇಟ್‌ ಆಳ್ವ

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ಆರಂಭಗೊಂಡಿದೆ, ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನ್ಕರ್ ಬಿಜೆಪಿ ಬೆಂಬಲದೊಂದಿಗೆ ಜಯಭೇರಿ ಬಾರಿಸುವ ನಿರೀಕ್ಷೆಯಿದೆ. ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಅವರು ಎರಡನೇ ಸ್ಥಾನ ಪಡೆಯಬಹುದು ಎನ್ನಲಾಗಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಜಗದೀಪ್ ಧನ್ಕರ್ ಬಂಗಾಳದ ಮಾಜಿ ಗವರ್ನರ್ ಆಗಿದ್ದಾರೆ. ಅವರು  527 ಮತಗಳನ್ನು ಗೆಲ್ಲುವ ನಿರೀಕ್ಷೆಇದೆ. ಅಂದರೆ ಗೆಲ್ಲಲು ಅಗತ್ಯವಿರುವ 372 ಕ್ಕಿಂತ ಹೆಚ್ಚು ಮತ ಪಡೆಯಲಿದ್ದಾರೆ.

ಚುನಾವಣಾ ಕಾಲೇಜು 780 ಸಂಸದರನ್ನು ಒಳಗೊಂಡಿದೆ. ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 245. ಮೇಲ್ಮನೆಯಲ್ಲಿ ಖಾಲಿ ಇರುವ ಎಂಟು ಸ್ಥಾನಗಳು ಮತ್ತು ಮತದಾನದಿಂದ ದೂರವಿರಲು ನಿರ್ಧರಿಸಿದ ತೃಣಮೂಲ ಕಾಂಗ್ರೆಸ್‌ನ 36 ಸಂಸದರನ್ನು ಬಿಟ್ಟರೆ, 744 ಸಂಸದರು ಮತ ಚಲಾಯಿಸುವ ನಿರೀಕ್ಷೆಯಿದೆ.
ಬಿಜೆಪಿಯ 394 ಸೇರಿದಂತೆ ಎನ್‌ಡಿಎ 441 ಸಂಸದರನ್ನು ಹೊಂದಿದೆ. ಐವರು ನಾಮನಿರ್ದೇಶಿತ ಸದಸ್ಯರು ಕೂಡ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದಾರೆ.

ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ, ಜಗನ್ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್, ಮಾಯಾವತಿಯ ಬಹುಜನ ಸಮಾಜ ಪಕ್ಷ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಅಕಾಲಿದಳ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಬಣ ಧನ್ಕರ್‌ ಅವರಿಗೆ ಬೆಂಬಲ ನೀಡಿದೆ. ಇವು ಒಟ್ಟು 81 ಸಂಸದರನ್ನು ಹೊಂದಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top