News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾನವೀಯ ನೆರವು: ಮೋದಿಗೆ ಕೃತಜ್ಞತೆ ಹೇಳಿದ ಶ್ರೀಲಂಕಾ ಪ್ರಧಾನಿ ಗುಣವರ್ಧನೆ

ನವದೆಹಲಿ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಮಾನವೀಯ ನೆರವು ನೀಡಿದ್ದಕ್ಕಾಗಿ ಹೊಸದಾಗಿ ಚುನಾಯಿತರಾದ ಶ್ರೀಲಂಕಾ ಪ್ರಧಾನಿ ದಿನೇಶ್ ಗುಣವರ್ಧನಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೋದಿಯ ಅಭಿನಂದನಾ ಪತ್ರಕ್ಕೆ ಪ್ರತಿಕ್ರಿಯಿಸಿರುವ ಶ್ರೀಲಂಕಾ ಪ್ರಧಾನಿ, “ಉಭಯ ದೇಶಗಳ ನಡುವಿನ ದೀರ್ಘಕಾಲದ ಬಾಂಧವ್ಯ ಮತ್ತಷ್ಟು ವೃದ್ಧಿಯಾಗಿದೆ. ಭಾರತ ಮತ್ತು ಶ್ರೀಲಂಕಾವು ಅನೇಕ ಕ್ಷೇತ್ರಗಳಲ್ಲಿ ಪರಸ್ಪರ ಲಾಭದಾಯಕ ಪಾಲುದಾರಿಕೆಯಾಗಿ ವರ್ಷಗಳಿಂದ ಪ್ರವರ್ಧಮಾನಕ್ಕೆ ಬಂದಿವೆ. ಮಾನವೀಯ ನೆರವಿಗಾಗಿ ಕೃತಜ್ಞರಾಗಿದ್ದೇವೆ” ಎಂದಿದ್ದಾರೆ.

ಇದಕ್ಕೂ ಮುನ್ನ ಆಗಸ್ಟ್ 1 ರಂದು ಗುಣವರ್ಧನಾ ಅವರಿಗೆ ಅಭಿನಂದನಾ ಪತ್ರವನ್ನು ಕಳುಹಿಸಿದ ಪ್ರಧಾನಿ ಮೋದಿ, ಶ್ರೀಲಂಕಾಕ್ಕೆ ಭಾರತವು ಎಲ್ಲ ರೀತಿಯ ಬೆಂಬಲವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ತಿಳಿಸಿದ್ದರು.

ಬಿಕ್ಕಟ್ಟಿನ ಸಮಯದಲ್ಲಿ ಅಗತ್ಯಗಳಿಗೆ ಅನುಗುಣವಾಗಿ ಶ್ರೀಲಂಕಾಕ್ಕೆ ಆರ್ಥಿಕ ನೆರವು ನೀಡುವಲ್ಲಿ ಭಾರತವು ಮುಂಚೂಣಿಯಲ್ಲಿದೆ.

ಕಳೆದ ಎರಡು ತಿಂಗಳುಗಳಲ್ಲಿ, ಭಾರತ ಸರ್ಕಾರವು ದ್ವೀಪ ರಾಷ್ಟ್ರಕ್ಕೆ 25 ಟನ್‌ಗಳಷ್ಟು ಔಷಧಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಿದೆ, ಇದು ಸುಮಾರು 370 ಮಿಲಿಯನ್ ಶ್ರೀಲಂಕಾ ರೂಪಾಯಿ (SLR) ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. 20,000 ಕೋಟಿಗೂ ಅಧಿಕ ಆರ್ಥಿಕ ನೆರವು ನೀಡಿದೆ. ʼನೆರೆಹೊರೆ ಮೊದಲು’ ನೀತಿಯ ಅಡಿಯಲ್ಲಿ ಅಕ್ಕಿ, ಹಾಲಿನ ಪುಡಿ ಮತ್ತು ಸೀಮೆಎಣ್ಣೆ ಸೇರಿದಂತೆ ಹೆಚ್ಚುವರಿ ಮಾನವೀಯ ಸರಕುಗಳನ್ನು ಆ ದೇಶಕ್ಕೆ ಪೂರೈಸಿದೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top