ನವದೆಹಲಿ: ಜಗದೀಪ್ ಧನ್ಕರ್ ಅವರು ಅಭೂತಪೂರ್ವ ಬೆಂಬಲದೊಂದಿಗೆ ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಅವರು ಅತ್ಯುತ್ತಮ ಉಪರಾಷ್ಟ್ರಪತಿಯಾಗಲಿದ್ದಾರೆ ಎಂದು ಟ್ವೀಟ್ನಲ್ಲಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರ ಪಾಂಡಿತ್ಯ ಮತ್ತು ಬುದ್ಧಿವಂತಿಕೆಯಿಂದ ನಮ್ಮ ದೇಶವು ಮಹತ್ತರವಾದ ಲಾಭವನ್ನು ಪಡೆಯುತ್ತದೆ ಎಂದು ಮೋದಿ ಹೇಳಿದ್ದಾರೆ.
ಧನ್ಕರ್ ಅವರಿಗೆ ಮತ ಹಾಕಿದ ಎಲ್ಲಾ ಸಂಸದರಿಗೆ ಮೋದಿ ಧನ್ಯವಾದ ಹೇಳಿದ್ದಾರೆ.
ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುವ ಸಮಯದಲ್ಲಿ, ಅತ್ಯುತ್ತಮ ಕಾನೂನು ಜ್ಞಾನ ಮತ್ತು ಬೌದ್ಧಿಕ ಪರಾಕ್ರಮ ಹೊಂದಿರುವ ರೈತನ ಪುತ್ರನನ್ನು ಉಪ ರಾಷ್ಟ್ರಪತಿಯಾಗಿ ಹೊಂದಲು ನಾವು ಹೆಮ್ಮೆಪಡುತ್ತೇವೆ ಎಂದು ಅವರು ಹೇಳಿದ್ದಾರೆ.
I thank all those MPs who have voted for Shri Jagdeep Dhankhar Ji. At a time when India marks Azadi Ka Amrit Mahotsav, we are proud to be having a Kisan Putra Vice President who has excellent legal knowledge and intellectual prowess. @jdhankhar1 pic.twitter.com/JKkpyAkv3i
— Narendra Modi (@narendramodi) August 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.