News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸವಾಲುಗಳನ್ನು ಜಯಿಸುವಲ್ಲಿ ರಾಜ್ಯಗಳ ಕಾರ್ಯವನ್ನು ಶ್ಲಾಘಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನೀತಿ ಆಯೋಗದ ಆಡಳಿತ ಮಂಡಳಿಯ ಏಳನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಭಾರತವು ಹೊರಬರಲು ಸಹಾಯ ಮಾಡಿದ ಶಕ್ತಿ ಸಹಕಾರಿ ಒಕ್ಕೂಟ. ಇದರ ಉತ್ಸಾಹದಲ್ಲಿ ಎಲ್ಲಾ ರಾಜ್ಯಗಳ ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

 ಸವಾಲುಗಳನ್ನು ಜಯಿಸುವಲ್ಲಿ ರಾಜ್ಯಗಳ ಕಾರ್ಯವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಕೇಂದ್ರದ ನೀತಿಯನ್ನು ರಾಜ್ಯಗಳ ಮೇಲೆ ಬಲವಂತವಾಗಿ ಹೇರಬಾರದು ಕೆಲವು ಬಿಜೆಪಿಯೇತರ ರಾಜ್ಯಗಳು ಪ್ರಧಾನಿಗೆ ಕೋರಿವೆ. ಅಲ್ಲದೇ ಜಿಎಸ್‌ಟಿ ಜಾರಿಯಿಂದಾಗುತ್ತಿರುವ ಆದಾಯ ಕೊರತೆಗಾಗಿ ರಾಜ್ಯಗಳಿಗೆ ನೀಡಲಾಗುವ ಪರಿಹಾರವನ್ನು ಐದು ವರ್ಷಗಳ ಕಾಲ ವಿಸ್ತರಿಸುವಂತೆಯೂ ಮುಖ್ಯಮಂತ್ರಿಗಳು ಕೋರಿದ್ದಾರೆ.

“ಕೋವಿಡ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಪ್ರತಿಯೊಂದು ರಾಜ್ಯವು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಇದರಿಂದಾಗಿ ಅಭಿವೃದ್ಧಿಶೀಲ ದೇಶಗಳು ಭಾರತವನ್ನು ಒಂದು ಮಾದರಿಯಾಗಿ ಮತ್ತು ಜಾಗತಿಕ ನಾಯಕನನ್ನಾಗಿ ನೋಡಲು ಪ್ರಾರಂಭಿಸಿವೆ” ಎಂದಿದ್ದಾರೆ.

ಕೃಷಿ ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣೆ ಕ್ಷೇತ್ರಗಳು ಆಧುನಿಕವಾಗಬೇಕು ಎಂದು ಮೋದಿ ಪ್ರತಿಪಾದಿಸಿದರು. ಇದು ಭಾರತವು ಆತ್ಮ ನಿರ್ಭರವಾಗಲು ನೆರವಾಗುತ್ತದೆ ಮತ್ತು ಕೃಷಿ ಕ್ಷೇತ್ರದಲ್ಲಿ ದೇಶವು ಜಯಗತಿಕ ನಾಯಕ ಎನಿಸಿಕೊಳ್ಳುತ್ತದೆ ಎಂದಿದ್ದಾರೆ.

ಜಿಎಸ್‌ಟಿ ಸಂಗ್ರಹವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅವರು ರಾಜ್ಯಗಳಿಗೆ ಕರೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top