News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಚಾಲನೆ

ಮೈಸೂರು: ಈ ಬಾರಿ ದಸರಾ ಉತ್ಸವವನ್ನು ದೇಶ–ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅದ್ದೂರಿ ಹಾಗೂ ಸಾಂಪ್ರದಾಯಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ನಿನ್ನೆ ಮೈಸೂರಿನಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸಚಿವರು ಮಾತನಾಡಿ, ಕಳೆದ ಎರಡು ವರ್ಷದಿಂದ ಸರಳವಾಗಿ ದಸರಾ ನಡೆದಿತ್ತು. ಈ ಬಾರಿ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ವ್ಯಾಪಕ ಪ್ರಚಾರ ನೀಡಲಾಗುವುದು. ದಸರಾ ವಸ್ತುಪ್ರದರ್ಶನವನ್ನು 15 ದಿನಗಳು ಮುಂಚಿತವಾಗಿಯೇ ಆರಂಭಿಸಲಾಗುವುದು. ನಾಡಹಬ್ಬ ಉದ್ಘಾಟನೆಗೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ ಎಂದರು.

ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 5 ಕೋಟಿ ರೂಪಾಯಿ ಖರ್ಚಾಗುವ ಅಂದಾಜಿದೆ. ಅದನ್ನು ಅರಮನೆ ಮಂಡಳಿ ಕೊಡಬೇಕು. ಹೊರಗಿನ ಕಾರ್ಯಕ್ರಮಗಳಿಗೆ 10 ಕೋಟಿ ಬೇಕಾಗಬಹುದು. ಅದನ್ನು ಮುಡಾದಿಂದ ಭರಿಸಲಾಗುತ್ತದೆ. ಇತರ ಖರ್ಚುಗಳಿಗೆ ಸರ್ಕಾರದಿಂದ ಅನುದಾನ ಕೋರಲಾಗುವುದು. ರಸ್ತೆಗಳ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಈ ಬಾರಿ ಗೋಲ್ಡ್‌ ಪಾಸ್‌ ಇರುವುದಿಲ್ಲ ಎಂದು ತಿಳಿಸಿದರು.

ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಚಾಲನೆ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top