ನವದೆಹಲಿ: ಉಪ ರಾಷ್ಟ್ರಪತಿ ಮತ್ತು ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಇಂದು ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ರಾಜ್ಯಸಭೆಯಲ್ಲಿ ಈ ವೇಳೆ ಮಾತನಾಡಿದ ಮೋದಿ, “ಇಂದು ನಾವೆಲ್ಲರೂ ರಾಜ್ಯಸಭಾ ಅಧ್ಯಕ್ಷರು ಮತ್ತು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯ ಮುಕ್ತಾಯದ ಸಂದರ್ಭದಲ್ಲಿ ಅವರಿಗೆ ಧನ್ಯವಾದ ಹೇಳಲು ಇಲ್ಲಿ ಹಾಜರಾಗಿದ್ದೇವೆ. ಇದು ಈ ಸದನಕ್ಕೆ ಬಹಳ ಭಾವನಾತ್ಮಕ ಕ್ಷಣವಾಗಿದೆ. ಸದನದ ಹಲವಾರು ಐತಿಹಾಸಿಕ ಕ್ಷಣಗಳು ನಾಯ್ಡು ಉಪಸ್ಥಿತಿಯೊಂದಿಗೆ ಸಂಬಂಧ ಹೊಂದಿವೆ” ಎಂದು ಹೇಳಿದರು.
“ಈ ಬಾರಿ ನಾವು ವಿಶೇಷ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಸ್ಪೀಕರ್ ಮತ್ತು ಪ್ರಧಾನ ಮಂತ್ರಿಗಳು ಸ್ವತಂತ್ರ ಭಾರತದಲ್ಲಿ ಜನಿಸಿದವರು ಮತ್ತು ಅವರೆಲ್ಲರೂ ಸಾಮಾನ್ಯ ಹಿನ್ನೆಲೆಯಿಂದ ಬಂದವರು. ಇದು ಸಾಂಕೇತಿಕ ಪ್ರಾಮುಖ್ಯತೆಯನ್ನು ಹೊಂದಿದೆ” ಎಂದಿದ್ದಾರೆ.
ವೈಯಕ್ತಿಕವಾಗಿ, ವಿಭಿನ್ನ ಪಾತ್ರಗಳಲ್ಲಿ ನಾಯ್ಡು ಅವರನ್ನು ಹತ್ತಿರದಿಂದ ನೋಡಿರುವುದು ನನ್ನ ಅದೃಷ್ಟ. ಅಂತಹ ಕೆಲವು ಪಾತ್ರಗಳಲ್ಲಿ ನಿಮ್ಮೊಂದಿಗೆ ಕೆಲಸ ಮಾಡುವ ಭಾಗ್ಯ ನನಗೂ ಸಿಕ್ಕಿದೆ. ಪಕ್ಷದ ಕಾರ್ಯಕರ್ತನಾಗಿ ನಿಮ್ಮ ಸೈದ್ಧಾಂತಿಕ ಬದ್ಧತೆ ಇರಲಿ, ಶಾಸಕರಾಗಿ ನಿಮ್ಮ ಕೆಲಸ ಇರಲಿ, ಸಂಸದರಾಗಿ ಸದನದಲ್ಲಿ ನಿಮ್ಮ ಚಟುವಟಿಕೆ ಇರಲಿ ನಮ್ಮ ಪ್ರೇರಣೆ ನೀಡಿದೆ ಎಂದಿದ್ದಾರೆ.
Personally, it has been my fortune that I have seen you closely in different roles. I also had the fortune to work with you in some of those roles. Be it your ideological commitment as a party worker, your work as an MLA, your activity in the House as an MP..: PM Modi in RS (1/2) pic.twitter.com/kHLps0yvMl
— ANI (@ANI) August 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.