ಮುಂಬಯಿ: ಸಂಕಷ್ಟದಲ್ಲಿರುವ ಮಹಾರಾಷ್ಟ್ರದ ರೈತರ ನೆರವಿಗೆ ಬಾಲಿವುಡ್ ನಟ ನಟಿಯರು ಆಗಮಿಸಬೇಕು, ಇಲ್ಲವಾದರೆ ಅವರ ಸಿನಿಮಾಗಳನ್ನು ಬಹಿಷ್ಕರಿಸಿ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖಂಡ ರಾಜ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಎಂಎನ್ಎಸ್ ಪತ್ರವೊಂದನ್ನು ಬಿಡುಗಡೆ ಮಾಡಿದ್ದು, ಬಾಲಿವುಡ್ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಎಲ್ಲರೂ ಸಂಕಷ್ಟದಲ್ಲಿರುವ ರೈತರಿಗೆ ಅದರಲ್ಲೂ ಮುಖ್ಯವಾಗಿ ಮರಾಠವಾಡದಲ್ಲಿರುವ ರೈತರಿಗೆ ಸಹಾಯ ಮಾಡಬೇಕು. ಇಲ್ಲಿ ನೀರಿನ ಸಮಸ್ಯೆಯಿದೆ, ರೈತರು ಆತ್ಮಹತ್ಯೆಗಳನ್ನು ಮಾಡುತ್ತಿದ್ದಾರೆ. ಇವರ ಸಹಾಯಕ್ಕೆ ಮುಂದಾಗದೆ ಇದ್ದರೆ ಹಿಂದಿ ಸಿನಿಮಾಗಳನ್ನು ಬಹಿಷ್ಕರಿಸುತ್ತೇವೆ, ಸಿನಿಮಾ ಮಂದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೇ ಈ ಪತ್ರವನ್ನು ಸಿನಿಮಾದ ಎಲ್ಲಾ ದಿಗ್ಗಜರಿಗೂ ಕಳುಹಿಸಿಕೊಡಲಾಗಿದೆ.
ಎಂಎನ್ಎಸ್ ಈ ಬೆದರಿಕೆಗೆ ಬಿಜೆಪಿ ಮತ್ತು ಶಿವಸೇನೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರೈತರ ಸಹಾಯಕ್ಕೆ ಆಗಮಿಸುವಂತೆ ಕೇಳಿಕೊಳ್ಳುವ ರೀತಿ ಇದಲ್ಲ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.