News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕ್ವಿಟ್‌ ಇಂಡಿಯಾಗೆ 80 ವರ್ಷ: ಲೋಕಸಭೆಯಲ್ಲಿ ಸ್ವಾತಂತ್ರ್ಯ ವೀರರಿಗೆ ಗೌರವ

ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 80 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯು ಇಂದು ಸ್ವಾತಂತ್ರ್ಯ ಚಳವಳಿಯ ಹುತಾತ್ಮರು ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿತು.

ವಾರಾಂತ್ಯದ ವಿರಾಮದ ನಂತರ ಇಂದು ಸದನವು ಸಭೆ ಸೇರಿದ ತಕ್ಷಣ, ಸ್ಪೀಕರ್ ಓಂ ಬಿರ್ಲಾ ಅವರು 80 ವರ್ಷಗಳ ಹಿಂದೆ ಇದೇ ದಿನದಂದು ಮಹಾತ್ಮ ಗಾಂಧೀಜಿಯವರು ಭಾರತಕ್ಕೆ ಸ್ವಾತಂತ್ರ್ಯವನ್ನು ಪಡೆಯಲು ಕಾರಣವಾದ ಕ್ವಿಟ್ ಇಂಡಿಯಾ ಚಳುವಳಿಯನ್ನು ಪ್ರಾರಂಭಿಸಿದರು ಎಂದರು.

“ಇದು ಭಾರತಕ್ಕೆ ಸ್ವಾತಂತ್ರ್ಯ ಪಡೆಯುವಲ್ಲಿ ಮಹತ್ವದ ತಿರುವು” ಎಂದು ಅವರು ಹೇಳಿದರು.

ಹುತಾತ್ಮ ಯೋಧರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸ್ಪೀಕರ್, ಅವರ ತ್ಯಾಗ ಬಲಿದಾನಗಳು ಪ್ರತಿಯೊಬ್ಬರಿಗೂ ಸಮರ್ಪಣಾ ಭಾವದಿಂದ ದೇಶ ಸೇವೆ ಮಾಡಲು ಪ್ರೇರಣೆ ನೀಡುತ್ತವೆ ಎಂದರು.

ಆಗಸ್ಟ್ 8, 1942 ರಂದು ಮಹಾತ್ಮಾ ಗಾಂಧಿಯವರು ಪ್ರಾರಂಭಿಸಿದ ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷರು ದೇಶಬಿಟ್ಟು ತೊಲಗುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿತು.

ಈ ಆಂದೋಲನವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಬಾಂಬೆ ಅಧಿವೇಶನದಲ್ಲಿ ಪ್ರಾರಂಭಿಸಲಾಯಿತು ಮತ್ತು ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸಲು ಗಾಂಧಿಯವರ ಸ್ಪಷ್ಟವಾದ ಕರೆಯನ್ನು ಒಳಗೊಂಡಿತ್ತು.

ಗಾಂಧಿಯವರು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಿಂದ ಮಹತ್ವದ ಭಾಷಣವನ್ನು ಮಾಡಿದರು, ಅಲ್ಲಿ ಅವರು “ಮಾಡು ಇಲ್ಲವೇ ಮಡಿ” ಎಂಬ ಪ್ರಸಿದ್ಧ ಕರೆ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top