ನವದೆಹಲಿ: ಭಾರೀ ಮಳೆಯಿಂದ ಮನೆಗಳು ಹಾನಿಗೊಳಗಾದ ಕುಟುಂಬಗಳಿಗೆ ಮತ್ತು ಸಂಬಂಧಿಕರು ಮತ್ತು ಸ್ನೇಹಿತರ ಸ್ಥಳದಲ್ಲಿ ಆಶ್ರಯ ಪಡೆದಿರುವ ಕುಟುಂಬಗಳಿಗೆ ಸರ್ಕಾರ ಆಹಾರ ಕಿಟ್ಗಳನ್ನು ನೀಡುತ್ತಿದೆ.
ಪ್ರತಿ ಕಿಟ್ನಲ್ಲಿ 10 ಕೆಜಿ ಅಕ್ಕಿ, 1 ಕೆಜಿ ಬೇಳೆ, ಉಪ್ಪು, ಸಕ್ಕರೆ, ಒಂದು ಲೀಟರ್ ಸೂರ್ಯಕಾಂತಿ ಎಣ್ಣೆ ಮತ್ತು ಮಸಾಲೆಗಳು ಇರುತ್ತವೆ.
“ಮನೆಗಳು ಕುಸಿದು ಬಿದ್ದ ಅಥವಾ ಜಲಾವೃತಗೊಂಡ ಸುಮಾರು 30% ಕುಟುಂಬಗಳು ಸರ್ಕಾರ ಸ್ಥಾಪಿಸಿರುವ ಪರಿಹಾರ ಕೇಂದ್ರಗಳಿಗೆ ಹೋಗಲು ನಿರಾಕರಿಸಿ ತಮ್ಮ ಸ್ನೇಹಿತರು ಮತ್ತು ಸಂಬಂಧಿಕರ ನಿವಾಸಗಳಲ್ಲಿ ಆಶ್ರಯ ಪಡೆದಿವೆ. ಅವರಿಗೆ ಆಶ್ರಯ ನೀಡಿದ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಕಡಿಮೆ ಮಾಡಲು, ಈ ಆಹಾರ ಕಿಟ್ಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಆರ್. ಅಶೋಕ ಹೇಳಿದ್ದಾರೆ.
ಇದಲ್ಲದೆ, ಪರಿಹಾರ ಕೇಂದ್ರಗಳಲ್ಲಿ ಸ್ಥಳಾಂತರಗೊಂಡವರಿಗೆ ಒದಗಿಸುವ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ಮೆನುವನ್ನು ಸಹ ಸರ್ಕಾರ ಬದಲಾಯಿಸಿದೆ. ಚಪಾತಿ, ರೊಟ್ಟಿ, ಸಿಹಿತಿಂಡಿ, ಅನ್ನ ಮತ್ತು ಸಾಂಬಾರ್ ಅನ್ನು ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ನೀಡುವುದರ ಜೊತೆಗೆ ಉತ್ತಮ ಉಪಹಾರ ನೀಡುತ್ತಿದ್ದೇವೆ. ಮೊದಲು ಅನ್ನ ಮತ್ತು ಸಾಂಬಾರ್ ಮಾತ್ರ ನೀಡಲಾಗುತ್ತಿತ್ತು ಎಂದು ಅಶೋಕ್ ಹೇಳಿದ್ದಾರೆ.
ಈ ಕೇಂದ್ರಗಳಲ್ಲಿ ವಾಸಿಸುವವರಿಗೆ ಟೂತ್ಬ್ರಷ್, ಟೂತ್ಪೇಸ್ಟ್ ಮತ್ತು ಟವೆಲ್ಗಳನ್ನು ಸಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರವಾಹ ಮತ್ತು ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಪರಿಹಾರ ನೀಡಲು ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮಳೆ ಸಂಬಂಧಿ ಅವಘಡಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ 48 ಗಂಟೆಗಳಲ್ಲಿ 5 ಲಕ್ಷ ರೂಪಾಯಿ ಪರಿಹಾರ ವಿತರಿಸುತ್ತಿದ್ದೇವೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.