News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಡಿ ವಿವಾದ ಪರಿಹಾರ: ಜಂಟಿ ಹೇಳಿಕೆಗೆ ಅಸ್ಸಾಂ, ಮಿಜೋರಾಂ ಸಹಿ

ಐಜ್ವಾಲ್: ಐಜ್ವಾಲ್ ಮತ್ತು ಮಿಜೋರಾಂನಲ್ಲಿ ನಡೆದ ಸಚಿವ ಮಟ್ಟದ ಚರ್ಚೆಗಳ ನಂತರ ಅಸ್ಸಾಂ ಮತ್ತು ಮಿಜೋರಾಂ ಸರ್ಕಾರಗಳು ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ಪರಿಹಾರದ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಮಂಗಳವಾರ ಜಂಟಿ ಹೇಳಿಕೆಗೆ ಸಹಿ ಹಾಕಿದವು.

ಹೇಳಿಕೆಯ ಪ್ರಕಾರ, ಗಡಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯನ್ನು ಉತ್ತೇಜಿಸಲು ಮತ್ತು ಕಾಪಾಡಲು ಎರಡೂ ರಾಜ್ಯಗಳು ಒಪ್ಪಿಕೊಂಡಿವೆ. ಅಲ್ಲದೆ, ಎರಡೂ ರಾಜ್ಯಗಳ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕನಿಷ್ಠ ಎರಡು ತಿಂಗಳಿಗೊಮ್ಮೆ ಸಭೆ ನಡೆಸುವುದನ್ನು ಕಡ್ಡಾಯ ಮಾಡಲಾಗಿದೆ.

“ಎರಡೂ ರಾಜ್ಯಗಳು ಶಾಂತಿಯನ್ನು ಉತ್ತೇಜಿಸಲು ಮತ್ತು ಕಾಪಾಡಿಕೊಳ್ಳಲು ಮತ್ತು ಗಡಿಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಒಪ್ಪಿಕೊಂಡಿವೆ, ಎರಡೂ ರಾಜ್ಯಗಳ ಗಡಿ ಜಿಲ್ಲೆಗಳ ಉಪ ಆಯುಕ್ತರು ಕನಿಷ್ಠ ಎರಡು ತಿಂಗಳಿಗೊಮ್ಮೆ ಸಭೆ ನಡೆಸಬೇಕ” ಎಂದು ಹೇಳಿಕೆ ತಿಳಿಸಿದೆ.

ಉಭಯ ರಾಜ್ಯಗಳ ಗಡಿಯಲ್ಲಿ ಜನರು ನಡೆಸುತ್ತಿರುವ ಕೃಷಿ ಮತ್ತು ಬೇಸಾಯ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಎರಡು ರಾಜ್ಯಗಳ ಉನ್ನತ ಮಟ್ಟದ ನಿಯೋಗಗಳ ನಡುವಿನ ಮುಂದಿನ ಸಭೆಯು ಈ ವರ್ಷದ ಅಕ್ಟೋಬರ್‌ನಲ್ಲಿ ಗುವಾಹಟಿಯಲ್ಲಿ ನಡೆಯಲಿದೆ, ಅಲ್ಲಿ ಸಮಸ್ಯೆಗಳು ಮತ್ತು ಹಕ್ಕುಗಳನ್ನು ವಿವರವಾಗಿ ಚರ್ಚಿಸಲಾಗುತ್ತದೆ. ಅಸ್ಸಾಂ ಸಚಿವ ಅತುಲ್ ಬೋರಾ ಇಂದಿನ ಸಭೆಯು ಸೌಹಾರ್ದಯುತ ಪರಿಹಾರಗಳನ್ನು ಹುಡುಕುವಲ್ಲಿ ಬಹಳ ದೂರ ಸಾಗಲಿದೆ ಎಂದು ಹೇಳಿದರು. ಗಡಿಯ ಎರಡೂ ಬದಿಯಲ್ಲಿ ವಾಸಿಸುವ ಜನರಿಗೆ ಹೇಳಿಕೆಯು ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top