ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ದೇಶದ ಪ್ರತಿಯೊಂದು ಪಂಚಾಯತ್ಗೆ ಸಹಕಾರವನ್ನು ಕೊಂಡೊಯ್ಯಲು ವಿಭಿನ್ನ ಕಾರ್ಯತಂತ್ರದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಸಹಕಾರಿ ಕ್ಷೇತ್ರವು ರೈತರು ಮತ್ತು ರಾಷ್ಟ್ರದ ಏಳಿಗೆಗೆ ಮಾರ್ಗವಾಗಿದೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಗ್ರಾಮೀಣ ಸಹಕಾರಿ ಬ್ಯಾಂಕ್ಗಳ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಶಾ, ಎರಡು ಲಕ್ಷ ಪಂಚಾಯತ್ಗಳು ಇನ್ನೂ ಪಿಎಸಿಎಸ್ಗಳನ್ನು ಹೊಂದಿರದ ಕಾರಣ ಪ್ರತಿ ಪಂಚಾಯತ್ನಲ್ಲಿ ಪ್ರಾಥಮಿಕ ಕೃಷಿ ಸಾಲ ಸಂಘಗಳ ಪಿಎಸಿಎಸ್ಗಳಿಗೆ ಐದು ವರ್ಷಗಳ ಕಾರ್ಯತಂತ್ರದ ಅಗತ್ಯವಿದೆ. ಪಿಎಸಿಎಸ್ಗಳ ದಕ್ಷತೆಯನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯಾಚರಣೆಗಳಿಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ಉದ್ದೇಶದಿಂದ ಸರ್ಕಾರವು ಕಂಪ್ಯೂಟರೀಕರಣವನ್ನು ಅನುಮೋದಿಸಿದೆ ಎಂದು ಅವರು ಹೇಳಿದರು.
ಗ್ರಾಮೀಣ ಭಾರತವನ್ನು ದೇಶದ ಆರ್ಥಿಕತೆಯೊಂದಿಗೆ ಸಂಪರ್ಕಿಸುವಲ್ಲಿ ಗ್ರಾಮೀಣ ಸಹಕಾರಿ ಬ್ಯಾಂಕ್ಗಳು ಮಹತ್ವದ ಪಾತ್ರ ವಹಿಸಿವೆ. ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿ ಸಹಕಾರಿ ಕ್ಷೇತ್ರಕ್ಕೆ ಸುವರ್ಣಾವಕಾಶವಾಗಿದೆ ಎಂದರು.
ಈ ಸಂದರ್ಭದಲ್ಲಿ, ರಾಜ್ಯ ಸಹಕಾರಿ ಬ್ಯಾಂಕ್ಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳು ಡಿಸಿಸಿಬಿಗಳು ಅಥವಾ ಪಿಎಸಿಎಸ್ಗಳಿಗೆ ಕಾರ್ಯಕ್ಷಮತೆ ಪ್ರಶಸ್ತಿಗಳನ್ನು ನೀಡಿದರು ಮತ್ತು 100 ವರ್ಷಗಳ ಸೇವೆಗಾಗಿ ಕೆಲವು ಅಲ್ಪಾವಧಿಯ ಸಹಕಾರಿ ಸಾಲ ಸಂಸ್ಥೆಗಳನ್ನು ಸನ್ಮಾನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.