ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉತ್ಸಾಹ ದೇಶದಾದ್ಯಂತ ಕಂಡುಬರುತ್ತಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದು, ದೇಶದ ಸ್ಫೂರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿವೆ.
ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ ದವಸ ಧಾನ್ಯ ಮತ್ತು ಪುಷ್ಪಗಳಿಂದ ಮೂಡಿಬಂದ ತಿರಂಗಾ ಎಲ್ಲರ ಗಮನವನ್ನು ತನ್ನತ್ತ ಸೆಳೆಯುತ್ತಿದೆ.
ಸುಮಾರು 900 ಕೆಜಿ ದವಸ ಧಾನ್ಯಗಳನ್ನು ಬಳಸಿ ತಿರಂಗಾ ವಿನ್ಯಾಸಪಡಿಸಲಾಗಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಮತ್ತು ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ಇದನ್ನು ವಿನ್ಯಾಸ ಪಡಿಸಲಾಗಿದೆ.
ಯಾವುದೇ ರಾಸಾಯನಿಕಗಳನ್ನು ಬಳಸದೆ, ಕೇವಲ ತರಕಾರಿ ಮತ್ತು ದವಸ ಧಾನ್ಯಗಳನ್ನು ಉಪಯೋಗಿಸಿ ತ್ರಿವರ್ಣ ಧ್ವಜದ ಚಿತ್ರಾಕೃತಿಯನ್ನು ರಚಿಸಲಾಗಿದೆ. ಕೇಸರಿ ಬಣ್ಣಕ್ಕೆ 300 ಕೆಜಿ ಕೆಂಪು ತೊಗರಿ, ಬಿಳಿ ಬಣ್ಣಕ್ಕಾಗಿ 300 ಕೆಜಿ ಸಾಗು ಮತ್ತು ಹಸಿರು ಬಣ್ಣಕ್ಕಾಗಿ 300 ಕೆಜಿ ಹೆಸರುಕಾಳು ಬಳಸಲಾಗಿದೆ. ಬೆಂಡೆಕಾಯಿ, ಮೂಲಂಗಿ, ಕ್ಯಾರೆಟ್ ಮುಂತಾದ ಹತ್ತು ಕೆಜಿ ಎಷ್ಟು ತರಕಾರಿಗಳನ್ನು ಕೂಡ ಬಳಸಲಾಗಿದೆ. ಕಲಾಕೃತಿಯ ಸುತ್ತ ಸುಮಾರು 54 ಕಳಶವಿಟ್ಟು ಹೂಗಳಿಂದ ಅಲಂಕರಿಸಲಾಗಿದೆ. ಸುಮಾರು 30 ಸದಸ್ಯರು 18 ಗಂಟೆಗಳ ಸಮಯ ತೆಗೆದುಕೊಂಡು ಇದನ್ನು ರಚಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.