ನವದೆಹಲಿ: ರಷ್ಯಾದಿಂದ ಭಾರತವು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ಸಮರ್ಥಿಸಿಕೊಂಡಿದ್ದಾರೆ. ಇದು “ಅತ್ಯುತ್ತಮ ಒಪ್ಪಂದ” ಎಂದು ಅವರು ಬಣ್ಣಿಸಿದ್ದಾರೆ.
ಬ್ಯಾಂಕಾಕ್ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ವಿಶ್ವದಾದ್ಯಂತ ಇಂಧನ ಬೆಲೆಗಳ ಏರಿಕೆಯ ಕುರಿತು ಚರ್ಚಿಸಿದರು.
ರಷ್ಯಾದಂದ ತೈಲ ಖರೀದಿಯ ಬಗ್ಗೆ ಮಾತನಾಡಿದ ಅವರು, “ನಾವು ನಮ್ಮ ಹಿತಾಸಕ್ತಿಗಳ ಬಗ್ಗೆ ತುಂಬಾ ಮುಕ್ತ ಮತ್ತು ಪ್ರಾಮಾಣಿಕವಾಗಿದ್ದೇವೆ. ನಾನು USD 2000 ತಲಾ ಆದಾಯ ಹೊಂದಿರುವ ದೇಶವನ್ನು ಹೊಂದಿದ್ದೇನೆ. ನನ್ನ ದೇಶದ ಜನರು ಹೆಚ್ಚಿನ ಬೆಲೆಗಳಿಗೆ ಇಂಧನ ಖರೀದಿಸಿ ನಿಭಾಯಿಸುವ ಜನರಲ್ಲ. ಉತ್ತಮ ವ್ಯವಹಾರವನ್ನು ಖಚಿತಪಡಿಸಿಕೊಳ್ಳುವುದು, ಜನರಿಗೆ ಸಮಂಜಸ ದರದಲ್ಲಿ ತೈಲ ಒದಗಿಸುವುದು ನನ್ನ ನೈತಿಕ ಕರ್ತವ್ಯ” ಎಂದಿದ್ದಾರೆ.
ಜೈಶಂಕರ್ ಜಾಗತಿಕ ಮಟ್ಟದಲ್ಲಿ ಭಾರತದ ಹಿತಾಸಕ್ತಿಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ, ಈ ವರ್ಷದ ಜೂನ್ನಲ್ಲಿ ಸ್ಲೋವಾಕಿಯಾದಲ್ಲಿ ನಡೆದ GLOBSEC 2022 ಬ್ರಾಟಿಸ್ಲಾವಾ ಫೋರಂನಲ್ಲಿ ಅವರು ರಷ್ಯಾದಿಂದ ಭಾರತದ ತೈಲ ಖರೀದಿಯ ವಿರುದ್ಧ ಕೇಳಿ ಬರುತ್ತಿರುವ ಟೀಕೆಗೆ ತಿರುಗೇಟು ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.