ನವದೆಹಲಿ: ಬಿಜೆಪಿ ಸೋಶಿಯಲ್ ಮೀಡಿಯಾದಲ್ಲಿ “ದೇಶ್ ಕಿ ಬದ್ಲಿ ಸೋಚ್” (ದೇಶದ ಮನಸ್ಥಿತಿ ಬದಲಾಗಿದೆ) ಅಭಿಯಾನ ಆರಂಭಿಸಿದ್ದು, ಇದರಡಿ ಅದು ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಹಿಂದಿನ ಕಾಂಗ್ರೆಸ್ ಪ್ರಧಾನಿಗಳ ಭಾಷಣಗಳೊಂದಿಗೆ ಹೋಲಿಸಿದೆ.
ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಮೋದಿ ಮತ್ತು ಅವರ ಹಿಂದಿನ ಪ್ರಧಾನಿಗಳಾದ ಮನಮೋಹನ್ ಸಿಂಗ್, ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ಜವಾಹರಲಾಲ್ ನೆಹರು ಮಾಡಿದ ಭಾಷಣಗಳ ಭಾಗಗಳನ್ನು ಉಲ್ಲೇಖಿಸಿ ಹೋಲಿಕೆ ಮಾಡಿದೆ.
1962 ರ ಚೀನಾದೊಂದಿಗಿನ ಯುದ್ಧದ ನಂತರ 1963 ರಲ್ಲಿ ಮಾಡಿದ ಭಾಷಣದಲ್ಲಿ ಹುತಾತ್ಮರಾದ ಸೈನಿಕರಿಗೆ ಯಾವುದೇ ಗೌರವವನ್ನು ನೆಹರು ಅರ್ಪಿಸಲಿಲ್ಲ. ಆದರೆ 2020 ರ ಭಾಷಣದಲ್ಲಿ ಮೋದಿ ಅವರು ಲಡಾಖ್ನಲ್ಲಿ ಚೀನಾದ ಪಡೆಗಳೊಂದಿಗಿನ ಸಂಘರ್ಷದಲ್ಲಿ ಸರ್ವೋಚ್ಚ ತ್ಯಾಗ ಮಾಡಿದವರನ್ನು ನೆನಪಿಸಿಕೊಂಡಿದ್ದಾರೆ ಎಂದು ಬಿಜೆಪಿ ಹೇಳಿದೆ.
2008 ಮತ್ತು 2009 ರಲ್ಲಿ ಸಿಂಗ್ ಅವರ ಭಾಷಣಗಳನ್ನು ಉಲ್ಲೇಖಿಸಿರುವ ಬಿಜೆಪಿ, ಸಿಂಗ್ ಕೇವಲ ಗಾಂಧಿ ಕುಟುಂಬವನ್ನು ಸಮಾಧಾನಪಡಿಸಿದ್ದರು ಎಂದು ಆರೋಪಿಸಿದೆ ಮತ್ತು 2014 ರಲ್ಲಿ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯಿಂದಾಗಿ ದೇಶವು ಇಲ್ಲಿಯವರೆಗೆ ತಲುಪಿದೆ ಎಂದು ಮೋದಿ ಹೇಳಿದ್ದರು ಎಂಬುದನ್ನು ಸ್ಮರಿಸಿದೆ.
1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ ನಂತರ, ಇಂದಿರಾ ಗಾಂಧಿಯವರು ರಾಷ್ಟ್ರೀಯ ಜೀವನದ ವಿವಿಧ ಅಂಶಗಳನ್ನು ಶುದ್ಧೀಕರಿಸಲು ಕಹಿ ಮಾತ್ರೆ ಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡರು, ಆದರೆ ಮೋದಿ ತಮ್ಮ 2017 ರ ಭಾಷಣದಲ್ಲಿ ಪ್ರಜಾಪ್ರಭುತ್ವವನ್ನು ಭಾರತದ “ದೊಡ್ಡ ಶಕ್ತಿ” ಎಂದು ಉಲ್ಲೇಖಿಸಿದ್ದಾರೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.