ಗಾಂಧಿನಗರ: ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನೆಡೆಯಾಗಿದ್ದು, ಅದರ ಇಬ್ಬರು ಹಿರಿಯ ನಾಯಕರಾದ ನರೇಶ್ ರಾವಲ್ ಮತ್ತು ರಾಜು ಪರ್ಮಾರ್ ಅವರು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾತನಾಡಿದ ರಾವಲ್, “ಕಾಂಗ್ರೆಸ್ನ ರಾಷ್ಟ್ರೀಯ ನಾಯಕತ್ವವು ಗುಜರಾತ್ ಮತ್ತು ಗುಜರಾತಿ ಜನರ ಬಗ್ಗೆ ಗೌರವ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇಬ್ಬರು ಗುಜರಾತಿ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅವರಿಗೆ ಸದಾ ಅಗೌರವ ತೋರಿಸುತ್ತದೆ ಗೌರವವಿಲ್ಲ” ಎಂದಿದ್ದಾರೆ
”ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ತನ್ನ ಪಕ್ಷದ ಎಲ್ಲಾ ನಾಯಕರೊಂದಿಗೆ ಮಾತನಾಡುವುದಿಲ್ಲ. ಆದರೆ ರಾಜ್ಯದ ನಾಯಕರೊಂದಿಗೆ ಮಾತನಾಡುವಾಗಲೂ ಅಲೆದು ತೂಗಿ ಮಾತನಾಡುತ್ತಾರೆ, ಪಕ್ಷದ ಹಿರಿಯ ನಾಯಕರನ್ನು ಕಡೆಗಣಿಸಲಾಗಿದೆ, ನಿರ್ಲಕ್ಷಿಸಲಾಗಿದೆ ಮತ್ತು ಅವರ ಅಭಿಪ್ರಾಯಗಳನ್ನು ಎಂದಿಗೂ ಪರಿಗಣಿಸುವುದಿಲ್ಲ, ಇದರಿಂದಾಗಿ ನಾವು ರಾಜೀನಾಮೆ ನೀಡಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.