ನವದೆಹಲಿ: 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್ಲೈನ್ ಮೂಲಕ ಶುದ್ಧ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಲ ಜೀವನ್ ಮಿಷನ್ ಅಡಿಯಲ್ಲಿ ಪಣಜಿಯಲ್ಲಿ ನಡೆದ ಹರಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಒಂದು ಲಕ್ಷ ಹಳ್ಳಿಗಳು ಬಯಲು ಶೌಚ ಮುಕ್ತವಾಗಿರುವುದು ಮಹತ್ವದ ಸಾಧನೆ ಎಂದರು.
ಜಗತ್ತು ಎದುರಿಸುತ್ತಿರುವ ನೀರಿನ ಭದ್ರತೆಯ ಸವಾಲನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯವನ್ನು ಸಾಧಿಸುವಲ್ಲಿ ನೀರಿನ ಕೊರತೆಯು ಒಂದು ದೊಡ್ಡ ಅಡಚಣೆಯಾಗಬಹುದು ಎಂದು ಹೇಳಿದರು.
ಸರಕಾರ ಕಳೆದ 8 ವರ್ಷಗಳಿಂದ ಜಲ ಭದ್ರತೆಯ ಯೋಜನೆಗಳಿಗೆ ನಿರಂತರ ಶ್ರಮಿಸುತ್ತಿದೆ. ನೀರಿನ ಭದ್ರತೆಯನ್ನು ಖಾತ್ರಿಪಡಿಸಲು ಸರ್ಕಾರದ ಬಹುಮುಖಿ ವಿಧಾನದ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು ‘ಕ್ಯಾಚ್ ದಿ ರೈನ್’, ಅಟಲ್ ಭುಜಲ್ ಯೋಜನೆ, ಪ್ರತಿ ಜಿಲ್ಲೆಯಲ್ಲಿ 75 ಅಮೃತಸರೋವರಗಳು, ನದಿ ಜೋಡಣೆ ಮತ್ತು ಜಲ ಜೀವನ್ ಮಿಷನ್ನಂತಹ ಉಪಕ್ರಮಗಳನ್ನು ಪಟ್ಟಿ ಮಾಡಿದರು. “ಭವಿಷ್ಯದ ಪೀಳಿಗೆ ಮತ್ತು ಮಹಿಳೆಯರಿಗೆ ಹರಘರ್ ಜಲದ ಪ್ರಯೋಜನವನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು. ರಾಜ್ಯಾದ್ಯಂತ 14 ಪ್ರಯೋಗಾಲಯಗಳಲ್ಲಿ ನೀರಿನ ಪರೀಕ್ಷೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.