ನವದೆಹಲಿ: ನ್ಯಾಯಾಲಯಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪ್ರಕರಣಗಳ ವಿಲೇವಾರಿಗೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿಯು ಉತ್ತೇಜನ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ
ಸಶಸ್ತ್ರ ಪಡೆಗಳ ನ್ಯಾಯಮಂಡಳಿ (ಪ್ರಧಾನ ಪೀಠ) ವಕೀಲರ ಸಂಘವು ನವದೆಹಲಿಯಲ್ಲಿ ಆಯೋಜಿಸಿದ್ದ ‘ಆತ್ಮಾವಲೋಕನ: ಸಶಸ್ತ್ರ ಪಡೆಗಳ ನ್ಯಾಯಮಂಡಳಿ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಪ್ರಕರಣಗಳ ವಿಲೇವಾರಿ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಅತ್ಯುತ್ತಮ ಪರಿಹಾರ ಎಂದು ಹೇಳಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಪ್ರಮುಖ ವಿಷಯಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಡೊಮೈನ್ ನಿರ್ದಿಷ್ಟ ನ್ಯಾಯಮಂಡಳಿಗಳನ್ನು ಕಲ್ಪಿಸಲಾಗುತ್ತಿದೆ ಮತ್ತು ಈ ವಿಶೇಷ ನ್ಯಾಯಮಂಡಳಿಗಳು ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ನ್ಯಾಯಾಂಗವು ಪ್ರಜಾಪ್ರಭುತ್ವದ ಪ್ರಬಲ ಸ್ತಂಭವಾಗಿದೆ ಆದರೆ ಈ ನ್ಯಾಯಾಂಗದ ತಳಹದಿಯ ಬಗ್ಗೆ ಕಡಿಮೆ ಚರ್ಚೆ ನಡೆಯುತ್ತದೆ. ನ್ಯಾಯಾಂಗದ ತಳಹದಿ ವಕೀಲ ಸಮುದಾಯವಾಗಿದ್ದು, ಅವರ ಮೇಲೆ ಸಮಾಜದ ಎಲ್ಲಾ ವರ್ಗದ ಜನರು ನಂಬಿಕೆ ಇಟ್ಟಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾನೂನು ಸಚಿವ ಕಿರಣ್ ರಿಜಿಜು ಕೂಡ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.