ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸರ್ಕಾರಿ ಶಾಲೆಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 14.5 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಹೇಳಿದ್ದಾರೆ.
2019 ರ ಮೊದಲು ದಾಖಲಾತಿಯು ಸ್ಥಿರವಾಗಿ ಕುಸಿಯುತ್ತಿತ್ತು, ಆದರೆ ಕಳೆದ ಕೆಲವು ವರ್ಷಗಳಲ್ಲಿ ಇದು ಗಮನಾರ್ಹವಾಗಿ ಹೆಚ್ಚಾಗಿದೆ ಎಂದಿದ್ದಾರೆ.
“2019 ರ ಹಿಂದಿನ ಮೂರು ವರ್ಷಗಳಲ್ಲಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ನಿರಂತರ ಇಳಿಕೆ ಕಂಡುಬಂದಿದೆ. ಆದರೆ, ಕಳೆದ ಎರಡು ವರ್ಷಗಳಲ್ಲಿ ದಾಖಲಾತಿಯು ಶೇಕಡಾ 14.5 ರಷ್ಟು ಹೆಚ್ಚಾಗಿದೆ” ಎಂದು ಸಿನ್ಹಾ ದೇವಕಿ ಆರ್ಯ ಪುತ್ರಿ ಪಾಠಶಾಲೆಯಲ್ಲಿ ವಾರ್ಷಿಕ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಶಿಫಾರಸ್ಸಿನಂತೆ ಬಾಲ್ಯದ ಆರೈಕೆ ಮತ್ತು ಶಿಕ್ಷಣಕ್ಕಾಗಿ ಕಣಿವೆಯಲ್ಲಿ ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಗವರ್ನರ್ ಸಿನ್ಹಾ ಹೇಳಿದ್ದಾರೆ.
ಅನುದಾನ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀಡಿದ ಆದ್ಯತೆಯಿಂದಾಗಿ ಪರಿಸ್ಥಿತಿ ಸುಧಾರಿಸಿದೆ. ಶಾಲೆಯಿಂದ ವಿಮುಖವಾಗುವ ಮಕ್ಕಳನ್ನು ಮತ್ತೆ ಕರೆತರಲು ಬನ್ನಿ ಶಾಲೆಗೆ ಹೋಗೋಣ ಅಭಿಯಾನ ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಇದರಡಿ 1 ವರ್ಷದಲ್ಲಿ 1.65 ಲಕ್ಷ ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ. ಇದಲ್ಲದೇ ತಲಾಶ್ ಆ್ಯಪ್ ಮೂಲಕವೂ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿಕೊಳ್ಳಲಾಗುತ್ತಿದೆ. ಆ್ಯಪ್ ಮೂಲಕ ಇಲ್ಲಿಯವರೆಗೆ 86 ಸಾವಿರ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ದಾಖಲಿಸಿಕೊಳ್ಳಲಾಗಿದೆ. ಹಲವು ಆಕ್ಷೇಪಗಳ ನಡುವೆಯೂ 1.24 ಲಕ್ಷ ಮಕ್ಕಳು ಶಿಶುಪಾಲನಾ ಶಿಕ್ಷಣ ಕೇಂದ್ರಕ್ಕೆ ದಾಖಲಾಗಿದೆ. ಈ ವರ್ಷ 2 ಸಾವಿರ ಶಿಶುವಿಹಾರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ವರ್ಷ ಸರ್ಕಾರಿಂದಲೇ ಇಲ್ಲಿನ 14 ಸಾವಿರ ಯುವತಿಯರಿಗೆ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ. ಅದರ ವೆಚ್ಚವನ್ನು ಆಡಳಿತವೇ ಭರಿಸಲಿದೆ ಎಂದು ಸಿನ್ಹಾ ಮಾಹಿತಿ ನೀಡಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.