ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ತಮ್ಮ ಪಕ್ಷದ ವಿರುದ್ಧ ಧ್ವನಿಯೆತ್ತಿ ನಾಯಕತ್ವವನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಇತ್ತೀಗಷ್ಟೇ ಹಿಮಾಚಲ ಕಾಂಗ್ರೆಸ್ನ ಸ್ಟೀರಿಂಗ್ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಆನಂದ್ ಶರ್ಮಾ, ತಮ್ಮ ಪಕ್ಷವು ಗಾಂಧಿಗಳನ್ನು ಮೀರಿ ಯೋಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಗುಲಾಂ ನಬಿ ಆಜಾದ್ ನಂತರ ಪಕ್ಷದ ಪ್ರಮುಖ ಹುದ್ದೆಯಿಂದ ಕೆಳಗಿಳಿದ ಎರಡನೇ ಹಿರಿಯ ಕಾಂಗ್ರೆಸ್ ನಾಯಕರಾಗಿರುವ ಶರ್ಮಾ, ತಮ್ಮ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಪ್ರಮುಖ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಶರ್ಮಾ, “ಕಾಂಗ್ರೆಸ್ ಕೇವಲ ಈ ಎರಡು ಹೆಸರುಗಳಿಗೆ ಸೀಮಿತವಾಗಿದೆಯೇ? ನಾವು ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಲೇವಡಿ ಮಾಡುತ್ತಿಲ್ಲ ತಾನೆ” ಎಂದು ಪ್ರಶ್ನಿಸಿದ್ದಾರೆ..
ಹಿಮಾಚಲ ಪ್ರದೇಶ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಆಘಾತ ನೀಡಿರುವ ಶರ್ಮಾ ಅವರು ಭಾನುವಾರ ಪಕ್ಷದ ರಾಜ್ಯ ಉಸ್ತುವಾರಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಅವರು, ವಿಧಾನಸಭಾ ಚುನಾವಣೆಯ ಯೋಜನೆ ಕುರಿತು ತಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ ಮತ್ತು ಚರ್ಚೆಗೆ ಆಹ್ವಾನಿಸಲಾಗಿಲ್ಲ ಎಂಬ ಹಲವು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
“ನನ್ನ ರಕ್ತದಲ್ಲಿ ಹರಿಯುವ ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧನಾಗಿದ್ದೇನೆ, ಈ ಬಗ್ಗೆ ಯಾವುದೇ ಅನುಮಾನ ಬೇಡ. ನಿರಂತರ ಬಹಿಷ್ಕಾರ ಮತ್ತು ಅವಮಾನಗಳನ್ನು ಎದುರಿಸುತ್ತಿದ್ದೇವೆ ಸ್ವಾಭಿಮಾನಿ ವ್ಯಕ್ತಿಯಾಗಿ ನನಗೆ ಯಾವುದೇ ಆಯ್ಕೆಯಿಲ್ಲ” ಎಂದು ಶರ್ಮಾ ಟ್ವಿಟರ್ನಲ್ಲಿ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಇದು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಭಿನ್ನಮತೀಯರನ್ನು ಸಮಾಧಾನಪಡಿಸುವ ಕಾಂಗ್ರೆಸ್ ಪ್ರಯತ್ನಗಳಿಗೆ ರಾಜೀನಾಮೆ ಹೊಸ ಹಿನ್ನಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.