ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ದೇಶದಲ್ಲಿ ಫೆಡರಲಿಸಂ ಅನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಾದಿಸಿದ್ದಾರೆ.
ಭೋಪಾಲ್ನಲ್ಲಿ 23 ನೇ ಕೇಂದ್ರ ವಲಯ ಮಂಡೀ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿ ರಾಯಪುರದಲ್ಲಿ ನಡೆದ ಸಭೆಯಲ್ಲಿ ಒಟ್ಟು 30 ವಿಷಯಗಳ ಕುರಿತು ಚರ್ಚಿಸಲಾಗಿದ್ದು, ಈ ಪೈಕಿ 26 ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಅಂತರರಾಜ್ಯ ಮಂಡಳಿಯ ನಿರಂತರ ಸಭೆಗಳಿಂದ ಸಮಸ್ಯೆಗಳ ಪರಿಹಾರದ ವೇಗ ಹೆಚ್ಚಿದ್ದು, ರಾಜ್ಯಗಳೂ ಪರಸ್ಪರ ಉತ್ತಮ ಪ್ರಯತ್ನಗಳನ್ನು ಅಳವಡಿಸಿಕೊಳ್ಳುತ್ತಿವೆ ಎಂದರು.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಭೆಯಲ್ಲಿ ಭಾಗವಹಿಸಿದ್ದರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಸಭೆಯಲ್ಲಿ ವರ್ಚುವಲ್ ಆಗಿ ಭಾಗಿಯಾಗಿದ್ದಾರೆ.
ಇಂದು ಅಮಿತ್ ಶಾ ಅವರು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಭೋಪಾಲ್ ಕ್ಯಾಂಪಸ್ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಎಂಪಿ ಪೊಲೀಸ್ ಇಲಾಖೆಯ 1300 ಕ್ಕೂ ಹೆಚ್ಚು ವಸತಿಗಳು ಮತ್ತು 54 ಆಡಳಿತ ಕಟ್ಟಡಗಳನ್ನು ಅವರು ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.