ನವದೆಹಲಿ: ಕೆನಡಾದ ಹ್ಯಾಲಿಫ್ಯಾಕ್ಸ್ನಲ್ಲಿ ನಡೆಯುತ್ತಿರುವ 65ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾರತೀಯ ಸಂಸದೀಯ ನಿಯೋಗವನ್ನು ಮುನ್ನಡೆಸುತ್ತಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿನ್ನೆ ನೆದರ್ಲ್ಯಾಂಡ್ಗೆ ಆಗಮಿಸಿದ್ದಾರೆ.
ಆಗಮನದ ನಂತರ, ಬಿರ್ಲಾ ಅವರು ನೆದರ್ಲೆಂಡ್ಸ್ನ ಸೆನೆಟ್ ಅಧ್ಯಕ್ಷ ಪ್ರೊ. ಜಾನ್ ಆಂಥೋನಿ ಬ್ರೂಯಿಜ್ನ್ ಅವರನ್ನು ಭೇಟಿ ಮಾಡಿದರು. ಸಭೆಯಲ್ಲಿ, ಉಭಯ ನಾಯಕರು ಸಂಸದೀಯ ಸಹಕಾರವನ್ನು ಹೆಚ್ಚಿಸುವ ಮತ್ತು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ವಿಸ್ತರಿಸುವ ಬಗ್ಗೆ ಮತ್ತು ಪರಸ್ಪರ ಆಸಕ್ತಿಯ ಹಲವಾರು ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಓಂ ಬಿರ್ಲಾ ಅವರು ಸುರಿನಾಮಿ-ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದು, “ಭಾರತ ಮತ್ತು ನೆದರ್ಲ್ಯಾಂಡ್ಸ್ ಬಲವಾದ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹಂಚಿಕೊಂಡಿವೆ. ನೆದರ್ಲ್ಯಾಂಡ್ಸ್ನಲ್ಲಿರುವ ಭಾರತೀಯ ಸಮುದಾಯದ ಕೊಡುಗೆಗಳು ಅನನ್ಯ. ತಮ್ಮ ಸಮರ್ಪಣೆ, ಪರಿಣತಿ ಮತ್ತು ವೃತ್ತಿಪರತೆಯ ಮೂಲಕ ಆರ್ಥಿಕತೆ ಮತ್ತು ಸಮಾಜವನ್ನು ಭಾರತೀಯ ಸಮುದಾಯ ಬಲಪಡಿಸುತ್ತಿದೆ” ಎಂದು ಹೇಳಿದರು.
ನಂತರ, ಇಂಡಿಯಾ ಹೌಸ್ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಬಿರ್ಲಾ, ರಾಷ್ಟ್ರಗಳ ಸಹಭಾಗಿತ್ವದಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನವನ್ನು ಎತ್ತಿ ತೋರಿಸಿದರು. ಭಾರತದ ಬೆಳವಣಿಗೆಯ ಕಥೆಯ ಲಾಭವನ್ನು ಪಡೆಯಲು ಅವರು ಭಾರತೀಯ ವಲಸಿಗರನ್ನು ಒತ್ತಾಯಿಸಿದರು.
ಇದಕ್ಕೂ ಮುನ್ನ ಅವರು ಹೇಗ್ನಲ್ಲಿರುವ ಸೇವಾಧಾಮ ಹಿಂದೂ ಕೇಂದ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 65ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನವು ಕೆನಡಾದ ಹ್ಯಾಲಿಫ್ಯಾಕ್ಸ್ನಲ್ಲಿ ಇದೇ ತಿಂಗಳ 20 ರಿಂದ 26 ರವರೆಗೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.