ಮುಂಬಯಿ: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನ ಹೇಳಿಕೆ ನೀಡಿ ಸುದ್ದಿಯಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರಿಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲ ನೀಡಿದ್ದಾರೆ.
ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಈ ಹಿಂದೆ ಪ್ರವಾದಿ ಮೊಹಮ್ಮದ್ ಕುರಿತು ಹೇಳಿರುವ ಮಾತುಗಳನ್ನೇ ನೂಪುರ್ ಶರ್ಮಾ ಹೇಳಿದ್ದಾರೆ. ಆದರೆ ಝಾಕಿರ್ ನಾಯ್ಕ್ ಬಳಿ ಯಾರೂ ಕ್ಷಮೆಯನ್ನು ಕೇಳಿಲ್ಲ. ಆದರೆ ಇಂದು ನೂಪುರ್ ಬಳಿ ಕ್ಷಮೆ ಕೇಳುತ್ತಿದ್ದಾರೆ. ಅಂದು ಝಾಕಿರ್ ಹೇಳಿಕೆಯನ್ನು ಬೆಂಬಲಿಸಿದ್ದ ಮಂದಿ ಇದೀಗ ನೂಪುರ್ ಹೇಳಿಕೆಯನ್ನು ವಿರೋಧ ಮಾಡುತ್ತಿರುವುದೇಕೆ? ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.
ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಹಲವು ಬಾರಿ ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ್ದಾರೆ. ಹಿಂದೂಗಳ ಭಾವನೆ, ನಂಬಿಕೆಯನ್ನು ಕೂಹಕವಾಡಿದ್ದಾರೆ. ಆದರೆ ಈ ಕಾರಣಕ್ಕಾಗಿ ಹಿಂದೂಗಳು ಇಡೀ ಭಾರತದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ ಮಾಡಿಲ್ಲ. ಯಾರ ಹತ್ಯೆಯನ್ನು ಹಿಂದೂಗಳು ಮಾಡಿಲ್ಲ. ಹಿಂದೂಗಳು ಈ ನೆಲದ ಕಾನೂನು ಗೌರವಿಸಿ ದೂರು ನೀಡಿದ್ದಾರೆ. ಆದರೆ ನೂಪುರ್ ವಿಚಾರದಲ್ಲಿ ಮುಸ್ಲಿಮರು ಮಾಡಿದ್ದೇನು? ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.
ಈ ದೇಶದಲ್ಲ ಕಾನೂನು, ಪೊಲೀಸರು, ನ್ಯಾಯಾಂಗ ಇದೆ. ಅದು ಕಾರ್ಯನಿರ್ವಹಿಸುತ್ತಿದೆ. ಆದರೆ ಮುಸ್ಲಿಮರು ಅಮಾಯಕರ ಹತ್ಯೆ ಮಾಡುತ್ತಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಒಂದು ನ್ಯಾಯ, ಹಿಂದೂಗಳಿಗೆ ಒಂದು ನ್ಯಾಯ ಹೇಗೆ ಸಾಧ್ಯ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.