ಶ್ರೀನಗರ: ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಮಂಗಳವಾರ ಒಬ್ಬ ಉನ್ನತ ಭಯೋತ್ಪಾದಕ ಮತ್ತು ಅವನ ಸಹಚರನನ್ನು ಬಂಧಿಸಿದ್ದಾರೆ.
ಈ ಇಬ್ಬರನ್ನು ಭಯೋತ್ಪಾದಕರನ್ನು ಶಸ್ತ್ರಾಸ್ತ್ರ ಮತ್ತು ಹ್ಯಾಂಡ್ ಗ್ರೆನೇಡ್ ತಲುಪಿಸಲು ನಿಯೋಜಿಸಲಾಗಿತ್ತು. ಇವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಜಂಟಿ ಕಾರ್ಯಾಚರಣೆಯಲ್ಲಿದ್ದರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಇಬ್ಬರು ಶಂಕಿತ ಭಯೋತ್ಪಾದಕರ ಚಲನವಲನದ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಂಟಿ ಪೊಲೀಸ್ ಘಟಕ, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ತಪಾಸಣೆ ನಡೆಸಿ ಸೆರೆ ಹಿಡಿದಿದೆ.
“ಆ.23ರಂದು 2 ಶಂಕಿತ ಭಯೋತ್ಪಾದಕರ ಚಲನವಲನದ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಪೊಲೀಸರು, 22 ರಾಷ್ಟ್ರೀಯ ರೈಫಲ್ಸ್ ಮತ್ತು 92 ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಗಿಳಿದು ನೌಪೊರಾದಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸುತ್ತಿದ್ದವು. ವೇ ಜಂಕ್ಷನ್, MRF ಚೌಕ್, ಬಹ್ರಂಪೋರಾ ಸೇತುವೆ, ಸೋನಾವಾನಿ ಸೇತುವೆ ಮತ್ತು ಬೆಹ್ರಂಪೋರಾ ಸೀಲೂ ಸೇತುವೆಯಲ್ಲಿ ತಪಾಸಣೆ ನಡೆದಿದೆ. ಬೆಹ್ರಾಂಪೊರಾ ಸೀಲೋ ಸೇತುವೆಯಲ್ಲಿ ವಾಹನಗಳನ್ನು ಪರಿಶೀಲಿಸುತ್ತಿರುವಾಗ ಸೀಲೋ ಕಡೆಗೆ ಕಾರೊಂದು ಅನುಮಾನಾಸ್ಪದವಾಗಿ ಸಾಗುತ್ತಿರುವುದನ್ನು ನಾಕಾ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಧಾವಿಸಿ ವಾಹನವನ್ನು ನಿಲ್ಲಿಸಲು ಆದೇಶಿಸದ್ದಾರೆ, ಆದರೆ ಅದರಲ್ಲಿದ್ದ ಇಬ್ಬರು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಬಳಿಕ ಗುಂಡು ಹಾರಿಸಿ ಇಬ್ಬರನ್ನು ಸೆರೆಹಿಡಿಯಲಾಗಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ವಿಚಾರಣೆ ವೇಳೆ ತಾವು ನಡೆಸಲು ಯೋಜಿಸಿದ್ದ ದುಷ್ಕೃತ್ಯಗಳ ಬಗ್ಗೆ ಅವರು ಬಾಯ್ಬಿಟ್ಟಿದ್ದಾರೆ. ಅವರಿಂದ ಶಸ್ತ್ರಾಸ್ತ್ರ, ಹ್ಯಾಂಡ್ ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.