ನವದೆಹಲಿ: ಆಯುಷ್ಮಾನ್ ಭಾರತ್-ಪಿಎಂಜೆವೈ ಅಡಿಯಲ್ಲಿ ತೃತೀಯಲಿಂಗಿ ವ್ಯಕ್ತಿಗಳಿಗೆ ಸಮಗ್ರ ಆರೋಗ್ಯ ಪ್ಯಾಕೇಜ್ ಒದಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್ಎಚ್ಎ) ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವೀಯ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಡಾ. ವೀರೇಂದ್ರ ಕುಮಾರ್ ಅವರ ಸಮ್ಮುಖದಲ್ಲಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್ಎಚ್ಎ) ಸಿಇಒ ಡಾ. ಆರ್.ಎಸ್.ಶರ್ಮಾ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯದರ್ಶಿ ಶ್ರೀ ಆರ್. ಸುಬ್ರಮಣ್ಯಂ ಅವರು ಈ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದರು.
ಇದೊಂದು ಮಹತ್ವದ ದಿನ ಎಂದು ಬಣ್ಣಿಸಿದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವೀಯ, ಈ ತಿಳಿವಳಿಕೆ ಒಪ್ಪಂದವು ದೇಶದಲ್ಲೇ ಒಂದು ಅಪರೂಪದ್ದಾಗಿದೆ ಎಂದು ಬಣ್ಣಿಸಿದರು, ಇದು ಎಬಿ-ಪಿಎಂಜೆಎವೈ ಅಡಿಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ತೃತೀಯಲಿಂಗಿ ಸಮುದಾಯಕ್ಕೆ ಸೂಕ್ತವಾದ ಮತ್ತು ಗೌರವದ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ನೆರವಾಗುತ್ತದೆ. ಈ ಒಪ್ಪಂದವು ಸಮಾಜದಲ್ಲಿ ಮಹತ್ವದ ಪರಿವರ್ತನೆಯ ಸುಧಾರಣೆಗೆ ಅಡಿಪಾಯ ಹಾಕಿದೆ. ತೃತೀಯಲಿಂಗಿ ಸಮುದಾಯಕ್ಕೆ ವಿಶೇಷ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಕ್ರಮವು ಹಿಂದುಳಿದ ಸಮುದಾಯಕ್ಕೆ ಸಮಾನತೆಯನ್ನು ಖಾತ್ರಿಪಡಿಸುವುದನ್ನೂ ಮೀರಿದೆ ಎಂದು ಅವರು ಹೇಳಿದರು.
ತೃತೀಯಲಿಂಗಿ ಸಮುದಾಯವು ಕಳಂಕ ಅನುಭವಿಸುತ್ತದೆ ಮತ್ತು ಸಾಮಾಜಿಕವಾಗಿ ಪ್ರತ್ಯೇಕತೆಗೆ ಒಳಗಾಗುತ್ತಿದೆ ಎಂದು ಅವರು, ಎಬಿ-ಪಿಎಂಜೆಎವೈ ಅಡಿಯಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವುದು ಎಲ್ಲರನ್ನೂ ಒಳಗೊಳ್ಳುವ ಸಮಾಜದತ್ತ ಮಹತ್ವದ ಮತ್ತು ದೃಢವಾದ ಹೆಜ್ಜೆಯಾಗಿದೆ ಎಂದು ಒತ್ತಿ ಹೇಳಿದರು. ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇಂದು ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತಿದೆ, ಏಕೆಂದರೆ ಅವರು ದೇಶದ ಎಲ್ಲ ಜನರ ಸಮಾನತೆ ಹಾಗು ಸಮಗ್ರ ಸಮಾಜಕ್ಕಾಗಿ ಹೋರಾಡಿದವರು” ಎಂದು ಡಾ ಮಾಂಡವೀಯ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.