ನವದೆಹಲಿ: ಗುಲಾಂ ನಬಿ ಆಜಾದ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ಗೆ ಮತ್ತೊಂದು ಆಘಾತ ಎದುರಾಗಿದೆ, ಜಮ್ಮು ಮತ್ತು ಕಾಶ್ಮೀರದ ಮತ್ತೆ ಐವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ಕಾಂಗ್ರೆಸ್ ನಾಯಕತ್ವದ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.
ಗುಲಾಂ ನಬಿ ಅವರ ನಿಷ್ಠಾವಂತರಾದ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ ಅವರು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.
ಗುಲಾಂ ನಬಿ ಆಜಾದ್ ಅವರ ನಿರ್ಗಮನದ ನಂತರ ರಾಜೀನಾಮೆ ನೀಡಿದ ಐವರು ನಾಯಕರು, ಈ ಹಿಂದೆ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷರಾಗುವ ಪ್ರಸ್ತಾಪವನ್ನು ಆಜಾದ್ ತರಸ್ಕರಿಸಿದಾಗ ಅವರನ್ನು ಬೆಂಬಲಿಸಿದ್ದರು ಮತ್ತು ಕಾಂಗ್ರೆಸ್ನಲ್ಲಿ ಹೊಸ ಪಾತ್ರಗಳನ್ನು ವಹಿಸಲು ನಿರಾಕರಿಸಿದ್ದರು.
ಎಲ್ಲಾ ಐವರು ನಾಯಕರ ಸಹಿ ಮಾಡಿದ ರಾಜೀನಾಮೆ ಪತ್ರವನ್ನು ಈಗಾಗಲೇ ತಮ್ಮ ಹೈಕಮಾಂಡ್ಗೆ ಸಲ್ಲಿಸಿದ್ದಾರೆ.
“ನನ್ನ ರಾಜ್ಯದ ಅಭ್ಯುದಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನತೆಗೆ ಉತ್ತಮ ಮಾರ್ಗದರ್ಶನ ನೀಡುವ ಗುಲಾಂ ನಬಿ ಆಜಾದ್ ಅವರಂತಹ ನಾಯಕನ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವು ಕೊಡುಗೆ ನೀಡಲು ವಿಫಲವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರಾಜೀನಾಮೆ ನೀಡಿದ ನಾಯಕ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.