ಬೆಂಗಳೂರು: ಗಣೇಶ ಹಬ್ಬ ಆಗಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗಣೇಶನ ವಿಗ್ರಹ ತಯಾರಿಕೆಯ ಕಾರ್ಯಗಳು ಎಲ್ಲೆಡೆ ಭರದಿಂದ ಸಾಗುತ್ತಿದೆ. ವಿಶೇಷವೆಂದರೆ ರಾಜ್ಯದಲ್ಲಿ ಗಣೇಶನ ವಿಗ್ರಹ ತಯಾರಿಕೆಯಲ್ಲಿ ಗಿನ್ನಿಸ್ ದಾಖಲೆಯೊಂದು ಸೃಷ್ಟಿಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಗಣೇಶೋತ್ಸವ ಸಮಿತಿ ಸಹಯೋಗದಲ್ಲಿ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಒಂದೇ ಸೂರಿನಡಿ 3,308 ಜನರು ಗಣೇಶ ಮೂರ್ತಿಯನ್ನು ತಯಾರಿಸಿದರು. ಈ ಮೂಲಕ ಗಿನ್ನಿಸ್ ದಾಖಲೆಯನ್ನು ಸೃಷ್ಠಿ ಮಾಡಲಾಗಿದೆ.
ಪರಿಸರ ಸ್ನೇಹಿತ ಗಣೇಶ ಮೂರ್ತಿ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಒಂದೇ ಸೂರಿನಡಿ 10,000 ಗಣೇಶ ಮೂರ್ತಿ ತಯಾರಿಲು ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉದ್ದೇಶಿಸಿತ್ತು. ಇದರಡಿ ಸ್ಪರ್ಧೆಯಲ್ಲಿ 3,308 ಸ್ಪರ್ಧಿಗಳು ಪಾಲ್ಗೊಂಡು, ಪರಿಸರ ಸ್ನೇಹಿ ಗಣೇಶಮೂರ್ತಿಯನ್ನು ತಯಾರಿಸಿದರು ಮತ್ತು ಈ ಮೂಲಕ ಗಿನ್ನಿಸ್ ದಾಖಲೆಯನ್ನು ಸೃಷ್ಟಿ ಮಾಡಿದ್ದಾರೆ.
ಗಣೇಶ ಮೂರ್ತಿ ತಯಾರಿಕೆಯಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾರ್ವಜನಿಕರು ಉಚಿತವಾಗಿ ನೋಂದಾಯಿಸಿಕೊಂಡು ಭಾಗಿಯಾಗಿದ್ದರು. ಇವರಿಗೆ ನುರಿತ ಕಲಾವಿದರು ಗಣೇಶ ಮೂರ್ತಿ ತಯಾರಿಸುವ ಬಗ್ಗೆ ಕಲಿಸಿಕೊಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.