ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಕಾಮಗಾರಿ ಈಗಾಗಲೇ ಶೇಕಡ 40ರಷ್ಟು ಪೂರ್ಣಗೊಂಡಿದೆ ಎಂದು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯ್ ಮಾಹಿತಿ ನೀಡಿದ್ದಾರೆ.
“ಶ್ರೀರಾಮ ಮಂದಿರದ ಕಾಮಗಾರಿ ಶೇಕಡ 40ರಷ್ಟು ಪೂರ್ಣಗೊಂಡಿದೆ. 2023 ರಿಂದ ದೇವರ ದರ್ಶನ ಪಡೆಯಲು ಭಕ್ತಾದಿಗಳಿಗೆ ಅವಕಾಶ ಸಿಗಲಿದೆ” ಎಂದು ಅವರು ತಿಳಿಸಿದ್ದಾರೆ.
ದೇವಾಲಯದ ಸುತ್ತಲಿನ ರಸ್ತೆಗಳ ಸುಧಾರಣೆಯ ಕಾರ್ಯ ಮತ್ತು ನಿರ್ಮಾಣದ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿವೆ. ಜಗತ್ತಿನ ಮೂಲೆ ಮೂಲೆಯಲ್ಲಿರುವ ರಾಮ ಭಕ್ತರು 2023 ರಿಂದ ದೇವರಿಗೆ ನಮನ ಸಲ್ಲಿಸಬಹುದು ಎಂದಿದ್ದಾರೆ.
ದೇವಾಲಯವು ಕನಿಷ್ಠ ಒಂದು ಸಾವಿರ ವರ್ಷಗಳ ಕಾಲ ಸ್ಥಿರತೆಯಲ್ಲಿರಲು ಬೃಹತ್ ಅಡಿಪಾಯವನ್ನು ಹಾಕಲಾಗುತ್ತಿದೆ. ದೇವಸ್ಥಾನದ ವಿಸ್ತೀರ್ಣ, ಪ್ರಾಂಗಣ ಸೇರಿದಂತೆ ಒಟ್ಟು ಎಂಟು ಎಕರೆ ಜಾಗಗಳಿಗೆ ತೆರಳಲು ಆಯತಾಕಾರದಲ್ಲಿ ರಸ್ತೆ ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗರ್ಭಗುಡಿಗೆ ರಾಜಸ್ಥಾನದ ಮಖ್ರಾನ ಬೆಟ್ಟಗಳಿಂದ ತರಿಸಿರುವ ಬಿಳಿ ಅಮೃತ ಶಿಲೆಯನ್ನು ಬಳಸಲಾಗುತ್ತಿದೆ. ಅಮೃತಶಿಲೆಯ ಕೆತ್ತನೆ ಕಾರ್ಯ ಮುಗಿದಿದ್ದು, ಈಗಾಗಲೇ ಅಯೋಧ್ಯೆಗೆ ತರಲಾಗಿದೆ ಎಂದು ಹೇಳಿದ್ದಾರೆ. 2020ರ ಆಗಸ್ಟ್ ಐದರಂದು ಪ್ರಧಾನಿ ಮೋದಿ ಮಂದಿರದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.