ನವದೆಹಲಿ: ಕಾಂಗ್ರೆಸ್ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ‘ಮಾನವೀಯತೆ’ ತೋರಿದ್ದಾರೆ ಎಂದು ಹೊಗಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಜಾದ್, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನರು ಸಾವನ್ನಪ್ಪಿದ ಬಸ್ ದುರಂತವನ್ನು ನೆನಪಿಸಿಕೊಂಡರು.
“ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜರಾತ್ ಪ್ರವಾಸಿ ಬಸ್ನೊಳಗೆ ಗ್ರೆನೇಡ್ ಸ್ಫೋಟಗೊಂಡಿದ್ದರಿಂದ ಸ್ಥಳದಲ್ಲೇ ನೂರಾರು ಜನರು ಸಾವನ್ನಪ್ಪಿದ್ದಾರೆ. ಇದು ನಾನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಘಟನೆ. ಪ್ರಧಾನಿ ಮೋದಿ ಆಗ ಗುಜರಾತ್ನ ಮುಖ್ಯಮಂತ್ರಿಯಾಗಿದ್ದರು ಮತ್ತು ನನಗೆ ಕರೆ ಮಾಡಿದ್ದರು. ಘಟನೆಯ ಬಗ್ಗೆ ವಿವರ ಪಡೆಯುವ ತುಡಿತ ಅವರಿಗಿತ್ತು. ನಾನು ಗಾಯಾಳುಗಳ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಈ ಕ್ಷಣದಲ್ಲಿ ಮಾತನಾಡಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿಸುವಂತೆ ನನ್ನ ಸಿಬ್ಬಂದಿಗೆ ತಿಳಿಸಿದ್ದೆ” ಎಂದರು.
“ನಾನು ಪ್ರಧಾನಿ ಮೋದಿಯನ್ನು ಒರಟು ಮನುಷ್ಯ ಎಂದು ಭಾವಿಸಿದ್ದೆ ಆದರೆ ಅವರು ಮಾನವೀಯತೆಯನ್ನು ತೋರಿಸಿದರು” ಎಂದು ಆಜಾದ್ ಹೇಳಿದ್ದಾರೆ.
#WATCH | "I thought PM Modi to be a crude man but he showed humanity," says #GhulamNabiAzad
(Video: ANI) pic.twitter.com/GzYMAfUqHf
— The Times Of India (@timesofindia) August 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.