ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ ಅವರೊಂದಿಗೆ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ದ್ವಿಪಕ್ಷೀಯ ಸಂಬಂಧದ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.
ಯಾವುದೇ ಸೋರಿಕೆ ಇಲ್ಲದೆ ಫಲಾನುಭವಿಗಳಿಗೆ ಪ್ರಯೋಜನಗಳನ್ನು ತಲುಪಿಸಲು ಔಪಚಾರಿಕ ಬ್ಯಾಂಕಿಂಗ್ ಚಾನೆಲ್ನೊಂದಿಗೆ ಪ್ರತಿಯೊಬ್ಬ ಭಾರತೀಯರನ್ನು ಸಂಪರ್ಕಿಸಲು ಸರ್ಕಾರ ಬದ್ಧವಾಗಿದೆ ಎಂದು ಈ ವೇಳೆ ಮುರ್ಮು ಹೇಳಿದ್ದಾರೆ.
ಚರ್ಚೆಯ ಸಂದರ್ಭದಲ್ಲಿ ಉಭಯ ನಾಯಕರು ಸಾರ್ವತ್ರಿಕ ಹಣಕಾಸು ಸೇರ್ಪಡೆ ಉಪಕ್ರಮಗಳ ಕುರಿತು ಚರ್ಚಿಸಿದರು. ಕಳೆದ ಕೆಲವು ವರ್ಷಗಳಲ್ಲಿ ಈ ದಿಕ್ಕಿನಲ್ಲಿ ಭಾರತದಲ್ಲಿ ಸಾಧಿಸಿದ ಪ್ರಗತಿಯನ್ನು ರಾಣಿ ಮಾಕ್ಸಿಮಾ ಶ್ಲಾಘಿಸಿದರು.
ಕಳೆದ ವರ್ಷ ಭಾರತ-ನೆದರ್ಲ್ಯಾಂಡ್ನ ವರ್ಚುವಲ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಾರಂಭಿಸಲಾದ ‘ನೀರಿನ ಮೇಲಿನ ಕಾರ್ಯತಂತ್ರದ ಪಾಲುದಾರಿಕೆ’ ಮತ್ತು ದ್ವಿಪಕ್ಷೀಯ ಸಂಬಂಧಗಳ ಇತರ ಆಯಾಮಗಳು ಇತ್ತೀಚಿನ ವರ್ಷಗಳಲ್ಲಿ ಸುಧಾರಣೆಗೆ ಸಾಕ್ಷಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.
ರಾಣಿ ಮಾಕ್ಸಿಮಾ ಮೂರು ದಿನಗಳ ಭಾರತ ಭೇಟಿಯಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.