ಥಾಣೆ: ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವ ಮತ್ತು ದೇಶದ ಜನತೆಗಾಗಿ ಅವರು ಮಾಡುತ್ತಿರುವ ಕೆಲಸವನ್ನು ಪ್ರತಿಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಮೋದಿ ಅವರ ಬಗೆಗಿನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಯ ಬಗ್ಗೆ ಚಿಂತಿಸಬೇಡಿ, ಬದಲಿಗೆ 2029ರ ಚುನಾವಣೆಯ ಬಗ್ಗೆ ಯೋಚಿಸಿ ಎಂದು ಪ್ರತಿಪಕ್ಷಗಳಿಗೆ ಸಲಹೆ ನೀಡಿದ್ದಾರೆ.
2014ರಲ್ಲಿ ಮೋದಿ ಪ್ರಧಾನಿಯಾದ ನಂತರ ದೇಶದ ವಾತಾವರಣ ಉತ್ತಮ ರೀತಿಯಲ್ಲಿ ಬದಲಾಯಿತು ಎಂದಿದ್ದಾರೆ
ಪ್ರಧಾನಿ ಮೋದಿ ಒಮ್ಮೆಯೂ ಅನಾರೋಗ್ಯಕ್ಕೆ ಒಳಗಾಗದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.
ದೇಶ ವಿಭಿನ್ನ ಚಿಂತನೆಯಪ್ರಧಾನ ಮಂತ್ರಿಯನ್ನು ಪಡೆದುಕೊಂಡಿದೆ, ಅವರು ಜನರೊಂದಿಗೆ ನೇರವಾಗಿ ಸಂವಹನ ನಡೆಸುತ್ತಾರೆ ಮತ್ತು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿದ್ದಾರೆ ಎಂದು ಜಾವಡೇಕರ್ ಹೇಳಿದರು.
ಜನರು ಮೋದಿಯವರ ಕಾರ್ಯವನ್ನು ಇಷ್ಟಪಡುವುದರಿಂದಲೇ ಬಿಜೆಪಿ ಪದೇ ಪದೇ ಚುನಾವಣಾ ಯಶಸ್ಸನ್ನು ಪಡೆಯುತ್ತಿದೆ ಎಂದು ಅವರು ಪ್ರತಿಪಾದಿಸಿದರು.
“ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಪ್ರತಿಪಕ್ಷಗಳು ಮೊದಲು ಅರ್ಥಮಾಡಿಕೊಳ್ಳಬೇಕು, ಕಳೆದ 20 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಒಮ್ಮೆಯೂ ಅನಾರೋಗ್ಯಕ್ಕೆ ಒಳಗಾಗದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಮೋದಿಯವರು ವಿವಿಧ ಕಾರ್ಯಕ್ರಮಗಳು, ಚಟುವಟಿಕೆಗಳು ಮತ್ತು ಯೋಜನೆಗಳನ್ನು ಕೈಗೊಳ್ಳುತ್ತಿದ್ದಾರೆ” ಎಂದರು.
”ಹರ್ ಘರ್ ತಿರಂಗ ಅಭಿಯಾನದ ಮೂಲಕ ದೇಶದೆಲ್ಲೆಡೆ ದೇಶಭಕ್ತಿಯ ವಾತಾವರಣ ನಿರ್ಮಾಣವಾಗಿದೆ. ವಿಐಪಿ ಸಂಸ್ಕೃತಿ ಮಾಯವಾಗಿದೆ. ದಶಕಗಳಿಂದ ಇದ್ದ ದಾಖಲೆ ದೃಢೀಕರಣ ಪದ್ಧತಿ ಒಂದೇ ದಿನದಲ್ಲಿ ರದ್ದಾಗಿದೆ’’ ಎಂದರು.
ಪ್ರಧಾನಿಯವರ ಜನಪ್ರಿಯತೆಯಿಂದಾಗಿ ಅವರ ಪಕ್ಷ ಬಿಜೆಪಿ ಈಗ 11 ಕೋಟಿ ಸದಸ್ಯರನ್ನು ಹೊಂದಿದ್ದು, ಇದು ವಿಶ್ವದ ಅತಿದೊಡ್ಡ ರಾಜಕೀಯ ಸಂಘಟನೆಯಾಗಿದೆ ಎಂದು ಅವರು ಹೇಳಿದರು.
ಮೋದಿ ಸರ್ಕಾರದ ಕೆಲಸವು ಜನರ ಜೀವನದ ಪ್ರತಿಯೊಂದು ಅಂಶವನ್ನು ಮುಟ್ಟಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.