ಬೆಂಗಳೂರು: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಂದು ಬೆಂಗಳೂರಿನಲ್ಲಿ ಶ್ರೀ ಧರ್ಮಸ್ಥಳದಿಂದ ನಿರ್ಮಾಣವಾಗಿರುವ ಮಂಜುನಾಥೇಶ್ವರ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸಸ್ನ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಹಾದೇವಪುರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕೇಂದ್ರದ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ಇದಾಗಿದೆ.
“ಕ್ಷೇಮವನ”ವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಯೋಗಿ, “ಕರ್ನಾಟಕದಲ್ಲಿ ಮಂಜುನಾಥ ಎನ್ನುವುದು ನಾಥ ಪರಂಪರೆಯನ್ನೇ ಮುಂದುವರಿಸುತ್ತದೆ. ಇದರೊಂದಿಗೆ ಆಧ್ಯಾತ್ಮಿಕ ಭಾವನೆಯು ಉತ್ತರ ಪ್ರದೇಶ ಹಾಗೂ ಕರ್ನಾಟಕವನ್ನು ಒಂದಾಗಿಸುತ್ತದೆ” ಎಂದು ಹೇಳಿದರು.
“ವಿರೇಂದ್ರ ಹೆಗಡೆಯವರು ಹಿಂದಿನಿಂದಲೂ ಯೋಗ ಹಾಗೂ ನ್ಯಾಚುರೋಪಥಿಯನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಈ ಕೇಂದ್ರ ಸ್ಥಾಪನೆಯಾಗಿರುವುದು ಕರ್ನಾಟಕಕ್ಕೆ ದೇಶಕ್ಕೆ ಉಪಯುಕ್ತ. ಕರ್ನಾಟಕದ ಮುಖ್ಯಮಂತ್ರಿ ಯೋಗಿಯ ರೀತಿ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.
At the inauguration ceremony of Kshemavana in Bengaluru, Karnataka… https://t.co/Yn8a0vZ5ID
— Yogi Adityanath (@myogiadityanath) September 1, 2022
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕೇಂದ್ರ ಇವರು ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ "ಕ್ಷೇಮವನ"ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.
1/2 pic.twitter.com/LXqUXXZdGl— Dr Sudhakar K (@mla_sudhakar) September 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.