ಮಂಗಳೂರು: ಹಲವಾರು ಮಹತ್ವದ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ನಿನ್ನೆ ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರಾವಳಿಯ ಜನತೆ ಅಭೂತಪೂರ್ವವಾದ ಸ್ವಾಗತವನ್ನೇ ಕೋರಿದ್ದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರು ಹೊರ ವಲಯದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಎನ್ಎಂಪಿಎ ನಲ್ಲಿ ಬಂದಿಳಿದ ಮೋದಿ ಅವರು ನಂತರ ರಸ್ತೆ ಮಾರ್ಗದ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ರಸ್ತೆಯ ಉದ್ದಕ್ಕೂ ಎರಡು ಬದಿಗಳಲ್ಲಿ ಸಾವಿರಾರು ಜನರು ನೆರೆದು ಮೋದಿ ಮೋದಿ ಎಂದು ಘೋಷಣೆಗಳನ್ನು ಕೂಗಿದರು. ವಾಪಸ್ ತೆರಲುವಾಗಲೂ ರಸ್ತೆಯುದ್ಧಕ್ಕೂ ಜನ ಸಾಗರವೇ ನೆರೆದಿತ್ತು.
ಮಂಗಳೂರಿನಲ್ಲಿ ತಮಗೆ ದೊರೆತ ಈ ಅಭೂತಪೂರ್ವ ಸ್ವಾಗತ ಮತ್ತು ಪ್ರೀತಿಯನ್ನು ಮೋದಿ ಇಂದು ಟ್ವೀಟ್ ಮೂಲಕ ಸ್ಮರಿಸಿ ಧನ್ಯವಾದಗಳು ಅರ್ಪಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಮಂಗಳೂರಿನ ಜನರ ಪ್ರೀತಿ ಅಕ್ಕರೆಗೆ ವಿನಮ್ರನಾಗಿರುವೆ ಪ್ರಮುಖ ಅಭಿವೃದ್ಧಿ ಯೋಜನೆಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದದ್ದು ಸಂತಸ ತಂದಿದೆ” ಎಂದಿದ್ದಾರೆ. ಅಲ್ಲದೇ ರಸ್ತೆಯುದ್ಧಕ್ಕೂ ಜನರು ತಮಗೆ ಸ್ವಾಗತ ಕೋರಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ. pic.twitter.com/rrHfIMZwSU
— Narendra Modi (@narendramodi) September 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.