ನವದೆಹಲಿ: ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಶಿಕ್ಷಣ ತಜ್ಞ ಮತ್ತು ಮಾಜಿ ರಾಷ್ಟ್ರಪತಿ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವಗಳನ್ನು ಸಲ್ಲಿಸಲಾಗುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನವದೆಹಲಿಯಲ್ಲಿ 2022 ನೇ ಸಾಲಿನ ಆಯ್ದ 46 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣ ಸಚಿವಾಲಯವು ದೇಶದ ಅತ್ಯುತ್ತಮ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಲು ಪ್ರತಿ ವರ್ಷ ಶಿಕ್ಷಕರ ದಿನದಂದು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸುತ್ತದೆ.
ಪ್ರಶಸ್ತಿಗೆ ಶಿಕ್ಷಕರ ಆಯ್ಕೆಯನ್ನು ಪಾರದರ್ಶಕ ಮತ್ತು ಆನ್ಲೈನ್ ಮೂರು ಹಂತದ ಆಯ್ಕೆ ಪ್ರಕ್ರಿಯೆಯ ಮೂಲಕ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ 2022 ರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ ಶಿಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಹೊಸ ಸಂಶೋಧನೆ, ಪ್ರಯೋಗಗಳು ಮತ್ತು ಆವಿಷ್ಕಾರಗಳ ಮೂಲಕ ಶಿಕ್ಷಕರು ತಮ್ಮ ಸಾಮರ್ಥ್ಯ ಮತ್ತು ಪ್ರಾವೀಣ್ಯತೆಯನ್ನು ಸುಧಾರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮುರ್ಮು ಸಂದೇಶದಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ದೇಶವು ಹೊಸ ಎತ್ತರವನ್ನು ಸಾಧಿಸಲು ಶಿಕ್ಷಕರ ಶ್ರಮ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.