ನವದೆಹಲಿ: ಭಾನುವಾರ ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ 2022 ರ ಸೂಪರ್ 4 ರ ಹಣಾಹಣಿಯಲ್ಲಿ ಭಾರತವು ಪಾಕಿಸ್ಥಾನದ ವಿರುದ್ಧ ಸೋತಿದೆ. 18ನೇ ಓವರ್ನಲ್ಲಿ ಅರ್ಷದೀಪ್ ಸಿಂಗ್ ಅವರು ಆಸಿಫ್ ಅಲಿ ಕ್ಯಾಚ್ ಕೈಬಿಟ್ಟಿದ್ದು ಪಂದ್ಯಕ್ಕೆ ಮಹತ್ವದ ತಿರುವು ಎಂದು ಹಲವು ಕ್ರಿಕೆಟ್ ಅಭಿಮಾನಿಗಳು ಮತ್ತು ಪಂಡಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮ್ಯಾಚ್ ವಿನ್ನಿಂಗ್ ಕ್ಯಾಚ್ ಅನ್ನು ಕೈಬಿಟ್ಟಿದ್ದಕ್ಕಾಗಿ ಅರ್ಷದೀಪ್ ಅವರನ್ನು ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕ್ರೂರವಾಗಿ ಟ್ರೋಲ್ ಮಾಡುತ್ತಿದ್ದಾರೆ. ಆದರೆ ಅರ್ಷದೀಪ್ ಅವರ ವಿಕಿಪೀಡಿಯಾ ಪುಟವನ್ನು ಖಾಲಿಸ್ತಾನ್ನೊಂದಿಗೆ ಲಿಂಕ್ ಮಾಡಿ ಕಿಡಿಕೇಡಿಗಳು ವಿಕೃತಿ ಮೆರೆದಿದ್ದು ಇದರ ವಿರುದ್ಧ ಭಾರತ ಸರ್ಕಾರ ಕ್ರಮಕೈಗೊಳ್ಳಲು ಮುಂದಾಗಿದೆ.
ಇಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ವಿಕಿಪೀಡಿಯಾದ ಭಾರತೀಯ ಕಾರ್ಯನಿರ್ವಾಹಕರಿಗೆ ಈ ವಿಷಯದ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಿದೆ.
ವರದಿಯ ಪ್ರಕಾರ, ಅರ್ಷ್ದೀಪ್ ಅವರ ವಿಕಿಪೀಡಿಯಾ ಪುಟದಲ್ಲಿ ಮಾಡಲಾದ ಬದಲಾವಣೆಗಳು ಭಾರತದಲ್ಲಿ ಅಸ್ಥಿರತೆ ಉಂಟುಮಾಡಬಹುದು ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ಹೊಂದಿದೆ. ಅರರ್ಷದೀಪ್ ಅವರು ಖಲಿಸ್ತಾನಿ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಎಡಿಟ್ ಮಾಡಲಾಗಿದೆ. ಆದರೆ ಕೆಲವೇ ನಿಮಿಷದಲ್ಲಿ ಇದನ್ನು ಸರಿಪಡಿಸಲಾಗಿದೆ.
Wikipedia page of Indian Player Arshdeep Singh has been edited & deliberately Khalistan is added.
Who is behind this editing & targeting Arshdeep Singh?
Someone from Pakistan.
Here are the IP details of editor. pic.twitter.com/CErervW3Q2
— Anshul Saxena (@AskAnshul) September 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.