ನವದೆಹಲಿ: 4 ದಿನಗಳ ಭಾರತ ಭೇಟಿಯಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಇಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತವನ್ನು ಪಡೆದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಬಾಂಗ್ಲಾ ಪ್ರಧಾನಿಯನ್ನು ಬರಮಾಡಿಕೊಂಡರು, ಅಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಉಪಸ್ಥಿತರಿದ್ದರು.
ತಮ್ಮ ಭಾಷಣದಲ್ಲಿ, ಪಿಎಂ ಹಸೀನಾ ಅವರು ಭಾರತವನ್ನು ಮಿತ್ರ ಎಂದು ಉಲ್ಲೇಖಿಸಿದ್ದಾರೆ ಮತ್ತು ಎರಡೂ ದೇಶಗಳ ನಡುವಿನ ನಿರಂತರ ಸಹಕಾರಕ್ಕಾಗಿ ಮೋದಿ ಮತ್ತು ನಾಗರಿಕರಿಗೆ ಧನ್ಯವಾದ ಹೇಳಿದ್ದಾರೆ.
ಯಾವುದೇ ಸಮಸ್ಯೆಯನ್ನು ಸ್ನೇಹದಿಂದ ಪರಿಹರಿಸಬಹುದು ಎಂದು ಅವರು ಒತ್ತಿ ಹೇಳಿದ ಅವರು, ಒಟ್ಟಾರೆ ಆರ್ಥಿಕ ಅಭಿವೃದ್ಧಿಗೆ ಉಭಯ ದೇಶಗಳ ನಡುವಣ ಹೆಚ್ಚಿನ ಸಹಕಾರಕ್ಕೆ ಕರೆ ನೀಡಿದರು.
“ಭಾರತ ನಮ್ಮ ಸ್ನೇಹಿತ. ಭಾರತಕ್ಕೆ ಬಂದಾಗಲೆಲ್ಲಾ ನನಗೆ ಸಂತೋಷವಾಗುತ್ತದೆ, ಅದರಲ್ಲೂ ವಿಶೇಷವಾಗಿ ನಮ್ಮ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಾವು ಸೌಹಾರ್ದ ಸಂಬಂಧವನ್ನು ಹೊಂದಿದ್ದೇವೆ, ನಾವು ಪರಸ್ಪರ ಸಹಕರಿಸುತ್ತಿದ್ದೇವೆ. ಅದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ. ಭಾರತ ಮತ್ತು ಭಾರತೀಯರ ಕೊಡುಗೆ ಮತ್ತು ಬಾಂಗ್ಲಾದೇಶದ ಜನರ ಪರವಾಗಿ ನಾನು ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.
“ನಮ್ಮ ಜನರ ಒಕ್ಕೂಟ, ಬಡತನ ನಿರ್ಮೂಲನೆ ಮತ್ತು ಆರ್ಥಿಕತೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಮ್ಮ 2 ದೇಶಗಳು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ನಾನು ಭಾವಿಸುತ್ತೇನೆ. ಇದರಿಂದ ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾದಾದ್ಯಂತ ಜನಜೀವನ ಉತ್ತಮವಾಗುತ್ತದೆ” ಎಂದಿದ್ದಾರೆ.
Delhi | Prime Minister Narendra Modi receives Bangladesh PM Sheikh Hasina as she arrives at the Rashtrapati Bhavan. pic.twitter.com/Mif4N1di8y
— ANI (@ANI) September 6, 2022
The ceremonial reception of Bangladesh PM Sheikh Hasina underway at the Rashtrapati Bhavan, in Delhi. pic.twitter.com/PJ1DChnXQe
— ANI (@ANI) September 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.