ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಚಲನ ಮೂಡಿಸಿದ್ದ ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಮುಂದುವರಿದಿದೆ. ಇದರ ಭಾಗವಾಗಿ ಇಡಿ ದೇಶದ ಹಲವು ಭಾಗಗಳಲ್ಲಿ ದಾಳಿ ನಡೆಸುತ್ತಿದೆ.
ದೇಶದ 30 ಸ್ಥಳಗಳಲ್ಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗುತ್ತಿದೆ ಎಂದು ಸಂಬಂಧಿತ ಮೂಲಗಳು ತಿಳಿಸಿವೆ.
ದೆಹಲಿ ಸೇರಿ 30 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸುತ್ತಿರುವ ಇಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮತ್ತು ಕಚೇರಿ ಮಾತ್ರವಲ್ಲದೆ 30ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ದೆಹಲಿಯ ಹೊರತಾಗಿ, ಯುಪಿಯ ಲಕ್ನೋ, ಹರಿಯಾಣದ ಗುರುಗ್ರಾಮ್, ಚಂಡೀಗಢ, ಪಂಜಾಬ್, ಮಹಾರಾಷ್ಟ್ರದ ಮುಂಬೈ, ತೆಲಂಗಾಣದ ಹೈದರಾಬಾದ್, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.
ದೆಹಲಿ ಮದ್ಯ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಸಿಬಿಐ ತನ್ನ ಎಫ್ಐಆರ್ನಲ್ಲಿ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿ ಎಂದು ಹೆಸರಿಸಿದೆ. ಸಿಬಿಐ ಐಪಿಸಿ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 477-ಎ (ಖಾತೆಗಳ ಸುಳ್ಳು) ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ. ಮದ್ಯ ದಂಧೆಕೋರರಿಗೆ ರೂ.30 ಕೋಟಿ ವಿನಾಯಿತಿ ನೀಡಿರುವ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಅಬಕಾರಿ ನಿಯಮಗಳನ್ನು ಉಲ್ಲಂಘಿಸಿ ಲೈಸೆನ್ಸ್ ಅನ್ನು ಇಚ್ಛಾನುಸಾರ ವಿಸ್ತರಿಸಲಾಗಿದೆ ಮತ್ತು ನೀತಿ ನಿಯಮಗಳನ್ನು ರೂಪಿಸಲಾಗಿದೆ ಎಂಬ ಆರೋಪ ಅವರ ವಿರುದ್ಧ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.